ಉಡುಪಿ :ಜನವರಿ 22:ಕೆಲವು ದಿನಗಳಿಂದ ಮಲ್ಪೆ ಸುತ್ತು ಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಈ ಕರಪತ್ರ ಹಂಚುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಕೇವಲ ಮೊಬೈಲ್ ಸಂಖ್ಯೆ ಮಾತ್ರ ಹೊಂದಿರುವ ಈ ಕರಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲ ತರಹದ ಸಾಲ ಸೌಲಭ್ಯ ಗಳಿಗಾಗಿ ಸಂಬಂಧಿಸಿದ ದಾಖಲೆ ಜತೆ ಸಂಪರ್ಕಿಸುವಂತೆ ಎರಡು ಮೊಬೈಲ್ ಸಂಖ್ಯೆ ನೀಡಲಾಗಿದೆ.
ಆದರೆ ಸರಕಾರದ ಅಧಿಕೃತ ಪರವಾನಗಿಯನ್ನು ಪ್ರಾಧಿಕಾರ ದಿಂದ ಪಡೆಯದೆ ಹಾಗೂ ಸಂಸ್ಥೆಯ ಹೆಸರು, ವಿಳಾಸ ತಿಳಿಸದೆ ಅನಧಿಕೃತವಾಗಿ ಮಾಡುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕರು ಈ ರೀತಿಯ ಪ್ರಚೋದನೆಗೆ ಒಳಗಾಗದೆ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡದಿರುವುದು ಉತ್ತಮ ಎಂದು ಜಿಲ್ಲಾಡಳಿತ ಪ್ರಕಟಣೆ ಯಲ್ಲಿ ತಿಳಿಸಿದೆ.