Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಮತ್ತು ನಿಯಮಗಳನ್ನು ತಪ್ಪದೆ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸೂಚನೆ ..!!

Dhrishya News by Dhrishya News
31/01/2025
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ :ಜನವರಿ 30: ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜನವರಿ 29 ರಂದು  ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತ ಸಭೆ ಹಮ್ಮಿಕೊಳ್ಳಲಾಗಿತ್ತು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ  ಸಭೆ ಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು 

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಕಾಲಕಾಲಕ್ಕೆ ನೀಡುವ ಎಲ್ಲಾ ಮಾರ್ಗ ಸೂಚಿಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು 

ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್‌ಗಳು ತಮ್ಮಿಂದ ಸಾಲ ಪಡೆದ ಗ್ರಾಹಕರಿಗೆ ಕಿರುಕುಳ ನೀಡುವ ಅನೇಕ ಪ್ರಕರಣಗಳು ಪತ್ರಿಕೆ ಗಳಲ್ಲಿ ಕೇಳಿ ಬರುತ್ತಿವೆ. ಇದಕ್ಕೆಲ್ಲಾ ಕಾರಣ ಅವುಗಳು ಆರ್‌ಬಿಐ ಮಾರ್ಗ ಸೂಚಿಗಳು ಹಾಗೂ ನಿಯಮಗಳನ್ನು ಪಾಲಿಸದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತವೆ ಎಂದರು.

ಮೈಕ್ರೋ ಫೈನಾನ್ಸ್‌ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಇತರೆಲ್ಲಾ ಪೂರ್ವಾ ಪರಗಳನ್ನು ಪರಿಶೀಲನೆ ಮಾಡಿ, ಅವರ ಆದಾಯದ ಶೇ.50ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್‌ಗಳು 3 ಲಕ್ಷ ರೂ. ವರೆಗೆ ಮಾತ್ರ ಸಾಲ ನೀಡಲು ಅವಕಾಶ ವಿದೆ. ಸಾಲ ಮರುಪಾವತಿ ಯ ಕುರಿತಂತೆ ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ, ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸೊಮೋಟೋ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದವರು ಎಚ್ಚರಿಸಿದರು.

ಅದೇ ರೀತಿ ಸಾಲ ನೀಡಿದ ಫೈನಾನ್ಸ್‌ಗಳ ವಿರುದ್ಧ ತಿರುಗಿ ಬೀಳುವುದು ಅಥವಾ ಸಾಲ ಪಡೆದವರ ಮೇಲೆ ಫೈನಾನ್ಸ್‌ ಗಳು, ಕಾನೂನು ಉಲ್ಲಂಘಿಸಿ ತಿರುಗಿ ಬಿದ್ದಲ್ಲಿ ಅಂತಹವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಸಂಬಂಧಿತ ಕಿರುಕುಳ ದೂರುಗಳನ್ನು ಕಂಟ್ರೋಲ್ ರೂಂ ಸಂಖ್ಯೆ: 0820-2574802ಕ್ಕೆ ಕಚೇರಿ ವೇಳೆಯಲ್ಲಿ ದೂರು ನೀಡಬಹುದು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳಲ್ಲಿ ತೆಗೆದುಕೊಳ್ಳುವ, ಕೊಡುವ ವ್ಯವಹಾರಗಳು ಶಾಂತಿಯುತ ವಾಗಿ ಆಗಬೇಕು. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9 ಕ್ಕೂ ಮುನ್ನ ಸಂಜೆ 6ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಅಡಿಯಲ್ಲಿ ಕ್ರ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಹಾಯಕ ಕಮಿಷನರ್ ಮಹೇಶ್ಚಂದ್ರ, ಲೀಡ್ ಬ್ಯಾಂಕ್ ಮೆನೇಜರ್ ಹರೀಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಜಿಲ್ಲೆಯ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Previous Post

ರಜತ ಮಹೋತ್ಸವದ ಮೈಲಿಗಲ್ಲು: ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್, ಆರೋಗ್ಯ ವೃತ್ತಿಪರರನ್ನು ರೂಪಿಸುವಲ್ಲಿ 25 ವರ್ಷಗಳ ಆಚರಣೆ..!!

Next Post

ಮಂತ್ರಾಲಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂತ್ರಾಲಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved