ಉಡುಪಿ :ಫೆಬ್ರವರಿ 05: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯ ವಾಗಿದೆ.
ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ (55) ಎಂದು ಗುರುತಿಸಲಾಗಿದೆ.
ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.








