ಉಡುಪಿ :ಫೆಬ್ರವರಿ 05:ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಉದ್ಯೋಗ ಖಾತರಿ ಯೋಜನೆಯ ಸಮಸ್ಯೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಲಾಯಿತು
ಜಿಲ್ಲಾ ಮುಖ್ಯ ಕಾರ್ಯನಿರ್ವಣಾಧಿಕಾರಿ ಯವರಿಗೆ ಮನವಿ ನೀಡಲಾಯಿತು ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಮುಖಂಡರಾದ ನಾಗರತ್ನ ನಾಡ,ರಾಜೀವ ಪಡುಕೋಣೆ, ಶೀಲಾವತಿ, ಉಡುಪಿ ವಲಯ ಮುಖಂಡರಾದ ಉಮೇಶ್ ಕುಂದರ್,ನಳಿನಿ ರೈತ ಸಂಘದ ಉಡುಪಿ ಜಿಲ್ಲಾ ಸಂಚಾಲಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು.