Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನಿಂದ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿ: ಪ್ರಯಾಣಿಕರು ಜಾಗರುಕುರಾಗದಿದ್ದರೆ ಹೆಚ್ಚು ದಂಡ ಪಾವತಿಯ ಅನಿವಾರ್ಯತೆ..!!

Dhrishya News by Dhrishya News
17/02/2025
in ಸುದ್ದಿಗಳು
0
0
SHARES
81
VIEWS
Share on FacebookShare on Twitter

ಉಡುಪಿ : ಫೆಬ್ರವರಿ 17:ಇಂದಿನಿಂದ  ಫಾಸ್ಟ್‌ಟ್ಯಾಗ್‌ನ ಹೊಸ ನಿಯಮ ಜಾರಿಗೆ ಬಂದಿದೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿ ಅಥವಾ ಬ್ಲ್ಯಾಕ್​ ಲಿಸ್ಟ್​ಗೆ ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ.

ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ 176 ಅಡಿಯಲ್ಲಿ ಬರಲಿದೆ.

ಹೊಸ ನಿಯಮದಲ್ಲಿ ಏನಿದೆ??

ಫಾಸ್ಟ್​ಟ್ಯಾಗ್​ನಲ್ಲಿ ಹಣ ಇರಬೇಕು, ಇಲ್ಲದಿದ್ದರೆ ಟೋಲ್ ಪ್ರವೇಶಕ್ಕೆ ಒಂದು ಗಂಟೆ ಮೊದಲು ಹಣ ಜಮೆ ಮಾಡಿರಬೇಕು. .

ಟೋಲ್ ದಾಟುವ 60 ನಿಮಿಷ ಮೊದಲು ಹಾಗೂ ದಾಟಿದ 10 ನಿಮಿಷಗಳ ಕಾಲ ಫಾಸ್ಟ್​ಟ್ಯಾಗ್ ಆಕ್ಟೀವ್ ಇರಬೇಕು. ಒಂದು ವೇಳೆ ಈ ನಿಯಮ ಪಾಲನೆ ಮಾಡದಿದ್ದರೆ ಪ್ರಯಾಣಿಕರು ದುಪ್ಪಟ್ಟು ಹಣ ಪಾವತಿ ಮಾಡಬೇಕಾಗುತ್ತದೆ.

ಕೆವೈಸಿ ಮಾಡಿಲ್ಲ ಎಂದಾದರೆ ನಿಮ್ಮ ಫಾಸ್ಟ್​ಟ್ಯಾಗ್ ಅನ್ನು ಕಪ್ಟುಪಟ್ಟಿಗೆ ಸೇರಿಸಲಾಗುತ್ತದೆ. 

ಒಂದು ವೇಳೆ ವಾಹನ ಟೋಲ್ ಗೇಟ್ ದಾಟಿದ 15 ನಿಮಿಷಗಳ ನಂತರ ಫಾಸ್ಟ್​ಟ್ಯಾಗ್ ಖಾತೆಯಿಂದ ಹಣ ಕಡಿತವಾದರೆ ಅದಕ್ಕೆ ವಾಹನ ಸವಾರರು ಹೆಚ್ಚಿನ ಶುಲ್ಕವನ್ನು ವಿಧಿಸಬೇಕಾಗುತ್ತದೆ.

ಟೋಲ್​ಗೇಟ್​ನಲ್ಲಿ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್ ಆಪರೇಟರ್ ಅನ್ನೇ ಹೊಣೆಯನ್ನಾಗಿ ಮಾಡಲಾಗುತ್ತದೆ. ತಪ್ಪು ಶುಲ್ಕ ಮತ್ತು ಹೆಚ್ಚುವರಿ ಹಣ ಕಡಿತಕ್ಕೆ ಸಂಬಂಧಿಸಿ ಬಳಕೆದಾರರು 15 ದಿನಗಳ ಬಳಿಕವಷ್ಟೇ ದೂರು ಸಲ್ಲಿಸಬಹುದು.

ಬದಲಾವಣೆಯು ಟೋಲ್ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಟೋಲ್ ಪ್ಲಾಜಾಗಳಲ್ಲಿನ ಜಗಳಗಳನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ . “ಈ ವ್ಯವಸ್ಥೆಯು ವಹಿವಾಟು ವಿಫಲವಾಗುವ ಸಂದರ್ಭಗಳನ್ನು ಕಡಿಮೆ ಮಾಡುತ್ತದೆ, ಟೋಲ್ ಅನುಭವವನ್ನು ಸುಧಾರಿಸುತ್ತದೆ ಮತ್ತು ಬಳಕೆದಾರರು ತಮ್ಮ ಖಾತೆ ನಿರ್ವಹಣೆಗೆ ಗಮನ ಕೊಡಲು ಪ್ರೋತ್ಸಾಹಿಸುತ್ತದೆ” ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಇದಲ್ಲದೆ, ಟೋಲ್ ಸಂಗ್ರಹವನ್ನು ಹೆಚ್ಚು ಪಾರದರ್ಶಕ ಮತ್ತು ಸುಗಮವಾಗಿಸುವುದು ಈ ಹೊಸ ವ್ಯವಸ್ಥೆಯ ಉದ್ದೇಶವಾಗಿದೆ. ಇದರಿಂದ ಟೋಲ್ ಪ್ಲಾಜಾದಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಬಹುದು ಮತ್ತು ಪ್ರಯಾಣವನ್ನು ಸುಗಮಗೊಳಿಸಬಹುದು. ಈ ಬದಲಾವಣೆಗಳ ಬಗ್ಗೆ ತಿಳಿದಿಲ್ಲದ ಬಳಕೆದಾರರು ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಬಹುದು. ಆದ್ದರಿಂದ, ಎಲ್ಲಾ ವಾಹನ ಮಾಲೀಕರು ತಮ್ಮ ಫಾಸ್ಟ್‌ಟ್ಯಾಗ್ ಅನ್ನು ಸರಿಯಾಗಿ ನಿರ್ವಹಿಸುವುದು ಮುಖ್ಯ.

ದೀರ್ಘ ಪ್ರಯಾಣವನ್ನು ಕೈಗೊಳ್ಳುವ ಮೊದಲು ನಿಮ್ಮ ಖಾತೆಯಲ್ಲಿ ಸಾಕಷ್ಟು ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಿ.

ಕಪ್ಪುಪಟ್ಟಿಗೆ ಸೇರುವುದನ್ನು ತಪ್ಪಿಸಲು ಕಾಲಕಾಲಕ್ಕೆ KYC ವಿವರಗಳನ್ನು ನವೀಕರಿಸಿ.

ಟೋಲ್ ಪ್ಲಾಜಾ ತಲುಪುವ ಮೊದಲು ನಿಮ್ಮ ಫಾಸ್ಟ್‌ಟ್ಯಾಗ್‌ನ ಸ್ಥಿತಿಯನ್ನು ಪರಿಶೀಲಿಸಿ.

ಬಳಕೆದಾರರು ತಮ್ಮ ಮಾಹಿತಿಯನ್ನು ನವೀಕರಿಸುತ್ತಿದ್ದರೆ ಮತ್ತು ತಮ್ಮ FASTag ಅನ್ನು ಸಕ್ರಿಯವಾಗಿ ನಿರ್ವಹಿಸಿದರೆ, ಅವರು ಬದಲಾದ ನಿಯಮಗಳನ್ನು ಸುಲಭವಾಗಿ ಪಾಲಿಸಬಹುದು ಮತ್ತು ಯಾವುದೇ ವಿಳಂಬ ಅಥವಾ ಅನಗತ್ಯ ದಂಡಗಳನ್ನು ತಪ್ಪಿಸಬಹುದು

Previous Post

ಮೂಡುಬಿದ್ರೆ : ಪಾಕತಜ್ಞರ ಮನೆಯಲ್ಲಿ ಕಳ್ಳತನ : ಲಕ್ಷಾಂತರ ರೂಪಾಯಿ ಮತ್ತು ಚಿನ್ನಾಭರಣ ಕಳವು..!!

Next Post

ವೇದದ ಅರ್ಹತೆ ಪಡೆದುಕೊಂಡ ರಾಮಾಯಣ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೇದದ ಅರ್ಹತೆ ಪಡೆದುಕೊಂಡ ರಾಮಾಯಣ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved