ಕಾರ್ಕಳ : ಫೆಬ್ರವರಿ 22: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.
ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.
ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








