ಉಡುಪಿ:ಫೆಬ್ರವರಿ 26: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದೆ. ಓಮನ್ ದೇಶದ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ನಲ್ಲಿದ್ದ ಮೀನುಗಾರರನ್ನು ವಶಪಡಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಗಲ್ಫ್ ರಾಷ್ಟ್ರವಾಗಿರುವ ಓಮನ್ ದೇಶದಿಂದ ಬಂದಿರುವ ಬೋಟ್ನಲ್ಲಿ ತಮಿಳುನಾಡು ಮೂಲದ ಮೂವರು ಮೀನುಗಾರರು ಪತ್ತೆಯಾಗಿದ್ದಾರೆ. ತಮಿಳುನಾಡಿನ ಜೇಮ್ಸ್ ಫ್ರಾಂಕ್ಲಿನ್ (50), ರಾಬಿನ್ ಸ್ಟನ್ (50) ಹಾಗೂ ಡಿರೋಸ್ ಅಲ್ಪೋನ್ಸ್ (38) ಅವರನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರೂ ತಮಿಳುನಾಡಿನಿಂದ ವಲಸೆ ಹೋಗಿ ಓಮನ್ ಮೂಲದ ಬೋಟ್ನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿದ್ದರು. ಆದರೆ, ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದನು. ಜೊತೆಗೆ, ಇವರ ಪಾಸ್ ಪೋರ್ಟ್ ಕಿತ್ತುಕೊಂಡು ಚಿತ್ರಹಿಂಸೆ ನೀಡುತ್ತಿದ್ದನು ಎಂದು ಹೇಳಿದ್ದಾರೆ.
ಇದಾದ ನಂತರ ಮೂವರೂ ಪ್ರಾಣಭಯದಿಂದ ಓಮನ್ ಹಾರ್ಬಾರ್ನಿಂದ ತಪ್ಪಿಸಿಕೊಂಡು ಭಾರತೀಯ ಮೀನುಗಾರಿಕಾ ವ್ಯಾಪ್ತಿಗೆ ಬಂದಿದ್ದಾರೆ. ಸಮುದ್ರ ಮಾರ್ಗದಲ್ಲಿ 4,000 ಕಿಲೋ ಮೀಟರ್ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಡೀಸೆಲ್ ಖಾಲಿಯಾಗಿ, ಹಣ ಆಹಾರವಿಲ್ಲದೆ ಮೀನುಗಾರರು ಪರದಾಡುತ್ತಿದ್ದರು. ಆಗ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ವಿದೇಶಿ ಬೋಟ್ ಪತ್ತೆ ಹಚ್ಚಿದ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದಾರೆ.
ಕಾರವಾರ ದಾಟಿ ಮಲ್ಪೆಯತ್ತ ಬರುತ್ತಿದ್ದ ವಿದೇಶಿ ಬೋಟ್ ಹಾಗೂ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿ ಬಂದಿರುವ ಹಿನ್ನೆಲೆಯಲ್ಲಿ ಕೋಸ್ಟ್ ಗಾರ್ಡ್ ಪೊಲೀಸರು ಅವರನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದೀಗ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಜಂಟಿ ಕಾರ್ಯಾಚರಣೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಮಿಥುನ್ ಎಚ್.ಎನ್., ಇಂಡಿಯನ್ ಕೋಸ್ಟ್ ಗಾರ್ಡ್ ಕಮಾಂಡರ್ ವಿಶಾಲ್ ರಾಣ, ಕರಾವಳಿ ಕಾವಲು ಪೊಲೀಸ್ ಡಿವೈಎಸ್ಪಿ ಟಿ.ಎಸ್.ಸುಲ್ಫಿ, ಸಿಎಸ್ಪಿ ಠಾಣೆಯ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ, ಪೊಲೀಸ್ ನಿರೀಕ್ಷಕ ಲೋಕೇಶ್, ಸಿಎಸ್ಪಿ ಕೇಂದ್ರ ಕಛೇರಿಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ., ಮಲ್ಪೆ ಸಿ.ಎಸ್.ಪಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಶಿವಶಂಕರ್, ಫೆಮೀನಾ, ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಸಿ.ಎಸ್.ಪಿ., ಕೇಂದ್ರ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿ ಹಾಗೂ ಪಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಶಿವಶಂಕರ್, ಫೆಮೀನಾ, ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪಾಲ್ಗೊಂಡಿದ್ದರು. ಸಿ.ಎಸ್.ಪಿ., ಕೇಂದ್ರ ಗುಪ್ತಚರ ದಳ ಹಾಗೂ ಕಸ್ಟಮ್ಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ.








