ಉಡುಪಿ :ಮಾರ್ಚ್ 03: ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಮಾ.4ರಂದು ನಾಳೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರ ಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ ಇವುಗಳ ಸಹಕಾರದಲ್ಲಿ ಉದ್ಯೋಗ ಮೇಳ ನಡೆಯಲಿದೆ
ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿ ಯರಿಂಗ್ ಪದವಿಧರರು ಭಾಗವಹಿಸಬಹುದು
ಸ್ಥಳದಲ್ಲಿ ನೋಂದಾವಣೆಗೂ ಅವಕಾಶ ಕಲ್ಪಿಸಲಾಗಿದೆ. ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇವೆ. ಅದೇ ರೀತಿ 56 ಕಂಪೆನಿಗಳು ಈಗಾಗಲೇ ಈ ಮೇಳದಲ್ಲಿ ಭಾಗವಹಿಸುವ ಬಗ್ಗೆ ನೋಂದಾಣಿ ಮಾಡಿವೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು