Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗುಜರಾತ್ ನ ವನ್ಯಜೀವಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರ ಪ್ರಧಾನಿ ಮೋದಿಯವರಿಂದ ಉದ್ಘಾಟನೆ..!!

Dhrishya News by Dhrishya News
04/03/2025
in ಮುಖಪುಟ
0
0
SHARES
32
VIEWS
Share on FacebookShare on Twitter

ಗುಜರಾತ್ : ಮಾರ್ಚ್ 04: ಗುಜರಾತ್‌ನ ಜಾಮ್ ನಗರದಲ್ಲಿರುವ ವಂತಾರ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಂದು (ಮಾರ್ಚ್ 4) ಉದ್ಘಾಟಿಸಿದರು.

ವಂತಾರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಮತ್ತು ಒಂದೂವರೆ ಲಕ್ಷಕ್ಕೂ ಹೆಚ್ಚು ರಕ್ಷಣೆ ಮಾಡಲಾದ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ. ವಂತಾರದಲ್ಲಿ ಇರುವಂಥ ವಿವಿಧ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದರು. ಇನ್ನು ಪುನರ್ವಸತಿ ಒದಗಿಸಲಾದ ವಿವಿಧ ಪ್ರಭೇದದ ಪ್ರಾಣಿಗಳೊಂದಿಗೆ ಅವರು ಸಮಯವನ್ನು ಕಳೆದರು.

ವಂತಾರದಲ್ಲಿ ಇರುವ ವನ್ಯಜೀವಿ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು, ಎಂಆರ್‌ಐ, ಸಿಟಿ ಸ್ಕ್ಯಾನ್‌ಗಳು, ಐಸಿಯುಗಳು ಸೇರಿದಂತೆ ಪಶುವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿದರು. ವನ್ಯಜೀವಿ ಅರಿವಳಿಕೆ, ಹೃದಯಶಾಸ್ತ್ರ, ಮೂತ್ರಪಿಂಡಶಾಸ್ತ್ರ, ಎಂಡೋಸ್ಕೋಪಿ, ದಂತವೈದ್ಯಶಾಸ್ತ್ರ, ಆಂತರಿಕ ಔಷಧ ಇತ್ಯಾದಿಗಳನ್ನು ಹೊಂದಿರುವ ವಿವಿಧ ವಿಭಾಗಗಳಿಗೆ ಸಹ ಭೇಟಿ ನೀಡಿದರು. ಇಲ್ಲಿ ಅವರು ಏಷ್ಯಾಟಿಕ್ ಸಿಂಹದ ಮರಿಗಳು, ಬಿಳಿ ಸಿಂಹದ ಮರಿ, ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದದ ಹಿಮಾಲಯದ ಚಿರತೆ ಮರಿ, ಕ್ಯಾರಕಲ್ಸ್ (ವಿಶಿಷ್ಟ ಬಗೆಯ ಕಾಡು ಬೆಕ್ಕು) ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳಿಗೆ ಆಹಾರ ನೀಡಿದರು, ಸಂತಸದ ಕ್ಷಣಗಳನ್ನು ಕಳೆದರು.

ಇನ್ನು ಪ್ರಧಾನಿ ಮೋದಿ ಅವರು ಆಹಾರ ನೀಡಿದಂಥ ಬಿಳಿ ಸಿಂಹದ ಮರಿಯು ವಂತಾರದಲ್ಲಿಯೇ ಜನಿಸಿದಂಥದ್ದು. ಅದರ ತಾಯಿಯನ್ನು ರಕ್ಷಿಸಿ, ಆರೈಕೆಗಾಗಿ ವಂತಾರಕ್ಕೆ ಕರೆತಂದ ನಂತರದಲ್ಲಿ ಬಿಳಿ ಸಿಂಹದ ಮರಿಯು ಜನಿಸಿತು. ಭಾರತದಲ್ಲಿ ಹಿಂದೊಮ್ಮೆ ಹೇರಳವಾಗಿದ್ದ ಕ್ಯಾರಕಲ್‌ಗಳು ಈಗ ಕಂಡುಬರುವುದು ಅಪರೂಪವಾಗುತ್ತಿವೆ. ವಂತಾರದಲ್ಲಿ ಕ್ಯಾರಕಲ್‌ಗಳ ಸಂರಕ್ಷಣೆಗಾಗಿ ಸೆರೆಯಲ್ಲಿ ಸಂತಾನೋತ್ಪತ್ತಿ ಕಾರ್ಯಕ್ರಮದಡಿ ಸಾಕಲಾಗುತ್ತದೆ ಮತ್ತು ನಂತರ ಕಾಡಿಗೆ ಬಿಡಲಾಗುತ್ತದೆ.

ನರೇಂದ್ರ ಮೋದಿ ಅವರು ಆಸ್ಪತ್ರೆಯ ಎಂಆರ್‌ಐ ಕೋಣೆಗೆ ಭೇಟಿ ನೀಡಿದರು ಮತ್ತು ಏಷಿಯಾಟಿಕ್ ಸಿಂಹಕ್ಕೆ ಎಂಆರ್‌ಐ ಮಾಡುವುದನ್ನು ವೀಕ್ಷಿಸಿದರು. ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ, ಅದನ್ನು ರಕ್ಷಣೆ ಮಾಡಿ ಜೀವ ಉಳಿಸುವುದಕ್ಕಾಗಿ ಶಸ್ತ್ರಚಿಕಿತ್ಸೆ ಮಾಡಲಾದ ಚಿರತೆಯ ಆಪರೇಷನ್ ಥಿಯೇಟರ್‌ಗೆ ಭೇಟಿ ನೀಡಿದರು.

ವಂತಾರದಲ್ಲಿ ರಕ್ಷಿಸಲಾದ ಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸಸ್ಥಾನವನ್ನೇ ಬಹುತೇಕ ಪ್ರತಿಬಿಂಬಿಸುವ ಸ್ಥಳಗಳಲ್ಲಿ ಇರಿಸಲಾಗಿದೆ. ಇಲ್ಲಿ ಕೈಗೊಂಡ ಕೆಲವು ಪ್ರಮುಖ ಸಂರಕ್ಷಣಾ ಉಪಕ್ರಮಗಳಲ್ಲಿ ಏಷಿಯಾಟಿಕ್ ಸಿಂಹ, ಹಿಮ ಚಿರತೆ, ಒಂದು ಕೊಂಬಿನ ಘೇಂಡಾಮೃಗ ಇತರವು ಸೇರಿಕೊಂಡಿವೆ.

ನರೇಂದ್ರ ಮೋದಿ ಅವರು ವಿವಿಧ ಉಗ್ರ ಸ್ವರೂಪದ- ಸ್ವಭಾವದ ಪ್ರಾಣಿಗಳೊಂದಿಗೆ ಸಮಯ ಕಳೆದರು. ಅದರಲ್ಲೂ ಗೋಲ್ಡನ್ ಟೈಗರ್‌ನೊಂದಿಗೆ ಮುಖಾಮುಖಿಯಾಗಿ ಕುಳಿತರು. ಒಂದೇ ತಾಯಿಯ ಮರಿಗಳಾದ 4 ಹಿಮ ಹುಲಿಗಳು ಇಲ್ಲಿ ಇದ್ದು, ಅವುಗಳನ್ನು ಸರ್ಕಸ್‌ನಿಂದ ರಕ್ಷಿಸಲಾಗಿದೆ. ಅಲ್ಲಿ ಅವುಗಳು ವಿವಿದ ಪ್ರದರ್ಶನಗಳನ್ನು ನೀಡುತ್ತಿದ್ದವು, ಜತೆಗೆ ಬಿಳಿ ಸಿಂಹ ಮತ್ತು ಹಿಮ ಚಿರತೆಗಳಿದ್ದವು.

ಅಪರೂಪದ ಒಕಾಪಿಯ ಮೈ ದಡವಿದ ನರೇಂದ್ರ ಮೋದಿ ಅವರು, ಚಿಂಪಾಂಜಿಗಳಿಗೆ ಎದುರಾದರು. ಸಾಕುಪ್ರಾಣಿಗಳಾಗಿ ಇರಿಸಲಾಗಿದ್ದ ಒಂದ ಕಡೆಯಿಂದ ವಂತಾರಕ್ಕೆ ಅವುಗಳನ್ನು ತರಲಾಗಿದೆ. ಇನ್ನು ಒರಾಂಗುಟನ್‌ಗಳೊಂದಿಗೆ ಅಪ್ಪಿಕೊಂಡರು ಮತ್ತು ಪ್ರೀತಿಯಿಂದ ಆಟವಾಡಿದರು. ನೀರಿನ ಅಡಿಯಲ್ಲಿರುವ ನೀರಾನೆಯನ್ನು, ಮೊಸಳೆಗಳನ್ನು ನೋಡಿದರು. ಜೀಬ್ರಾಗಳ ನಡುವೆ ನಡೆದಾಡಿದರು. ಜಿರಾಫೆ ಮತ್ತು ಘೇಂಡಾಮೃಗದ ಮರಿಗಳಿಗೆ ಆಹಾರ ನೀಡಿದರು. ಇನ್ನು ಒಂದು ಕೊಂಬಿನ ಘೇಂಡಾಮೃಗದ ಮರಿಯೊಂದು ಅನಾಥವಾಗಿದ್ದು, ಅದರ ತಾಯಿಯು ವಂತಾರದಲ್ಲಿಯೇ ಸಾವನ್ನಪ್ಪಿತು.

ದೊಡ್ಡ ಹೆಬ್ಬಾವು, ವಿಶಿಷ್ಟವಾದ ಎರಡು ತಲೆಯ ಹಾವು, ಎರಡು ತಲೆಯ ಆಮೆ, ಟ್ಯಾಪಿರ್ ನೋಡಿದರು. ಇನ್ನು ಚಿರತೆ ಮರಿಗಳನ್ನು ಕೃಷಿ ಜಮೀನಿನಲ್ಲಿ ಬಿಡಲಾಗಿತ್ತು. ಆ ನಂತರ ಗ್ರಾಮಸ್ಥರು ಅವುಗಳನ್ನು ಗುರುತಿಸಿ ರಕ್ಷಿಸಿದರು. ದೈತ್ಯ ನೀರುನಾಯಿ, ಬೊಂಗೊ (ಹುಲ್ಲೆ), ಸೀಲುಗಳು ಸಹ ನೋಡಿದ ನಂತರದಲ್ಲಿ ಸ್ನಾನ ಮಾಡುತ್ತಾ ಆಟವಾಡುತ್ತಿದ್ದ ಆನೆಗಳನ್ನು ಸಹ ನರೇಂದ್ರ ಮೋದಿ ವೀಕ್ಷಿಸಿದರು.

ಅಂದ ಹಾಗೆ ಈ ಹೈಡ್ರೋಥೆರಪಿ ಕೊಳಗಳು ವಿಶಿಷ್ಟವಾದವು. ಇವುಗಳಿಂದ ಸಂಧಿವಾತ ಮತ್ತು ಕಾಲು ಸಮಸ್ಯೆಗಳಿಂದ ಬಳಲುತ್ತಿರುವ ಆನೆಗಳ ಚೇತರಿಕೆಗೆ ಸಹಾಯ ಮಾಡುತ್ತವೆ ಮತ್ತು ಅವುಗಳ ಚಲನಶೀಲತೆಯನ್ನು ಸುಧಾರಿಸುತ್ತವೆ.

ಆನೆ ಆಸ್ಪತ್ರೆಯ ಕಾರ್ಯನಿರ್ವಹಣೆಯನ್ನು ಅವರು ನೋಡಿದರು. ಅಂದ ಹಾಗೆ ಇದು ಇಂಥದ್ದರ ಪೈಕಿ ವಿಶ್ವದ ಅತಿದೊಡ್ಡ ಆಸ್ಪತ್ರೆಯಾಗಿದೆ. ವಂತಾರದಲ್ಲಿ ರಕ್ಷಿಸಲಾದ ಗಿಳಿಗಳನ್ನು ಅವರು ಬಿಡುಗಡೆ ಮಾಡಿದರು. ವಂತಾರದಲ್ಲಿ ವಿವಿಧ ವಿವಿಧ ಕೇಂದ್ರಗಳ- ವಿಭಾಗಗಳನ್ನು ನಿರ್ವಹಿಸುತ್ತಿರುವ ವೈದ್ಯರು, ಸಹಾಯಕ ಸಿಬ್ಬಂದಿ ಮತ್ತು ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು

Previous Post

ಕಾರ್ಕಳ :ರಂಜಾನಿನ ಉಪವಾಸ ವ್ರತ ಆಚರಿಸಲು ಬಡ ಕುಟುಂಬಗಳಿಗೆ ಆಹಾರದ ಸಾಮಗ್ರಿಗಳ ಕೀಟ್ ಗಳ ವಿತರಣೆ..!!

Next Post

ಅಜೆಕಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಾಮೀನು ನಿರಾಕರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಜೆಕಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಾಮೀನು ನಿರಾಕರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved