ಕಾರ್ಕಳ :ಮಾರ್ಚ್ 7: ವಿಜೇತ ವಿಶೇಷ ಶಾಲಾ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ, ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ವಿಜೇತ ವಿಶೇಷ ಶಾಲೆಯ ಅಯ್ಯಪ್ಪನಗರದಲ್ಲಿ ವಿಜೃಂಭಣೆಯಿಂದ ನೆರವೇರಿತು
ಪಿ.ಜೆ.ಎಮ್ ಪೈ ಕಾರ್ಕಳ ಇದರ ಮಾಲಕರಾದ ನರಸಿಂಹ ಪೈ ಇವರು ವಿಶೇಷ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣ ನೆರವೇರಿಸಿದರು.
ಉದ್ಯಮಿಳಾದ ಪ್ರಶಾಂತ್ ಕಾಮತ್ ಇವರು ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ಮಹಿಳಾ ಬಂಟ್ಸ್ ಸಂಘ ಅಧ್ಯಕ್ಷರಾದ ಪೂರ್ಣಿಮಾ ಹೆಗ್ಡೆ, ಕೆಮ್ಮಂಜ & ಮಿಲನ್ ಮಲ್ಟಿ ಪರ್ಪಸ್ ಎ.ಸಿ ಹಾಲ್ ಮಾಲಕರಾದ ಲಯನ್ ಗುರುಪ್ರಸಾದ್ ಶೆಟ್ಟಿ ಶ್ರೀ ದುರ್ಗಾ ವಿದ್ಯಾ ಸಂಘ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಕೆ.ರಾಧಾಕೃಷ್ಣ ಶೆಟ್ಟಿ, ವಿಜೇತ ಶಾಲಾ ಅಧ್ಯಕ್ಷರು ರತ್ನಾಕರ್ ಅಮೀನ್, ಶಾಲಾ ಹಿತೈಷಿಗಳಾದ ಹೇಮಲತಾ ಶೆಟ್ಟಿ, ವಿಜೇತ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪೋಷಕರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದ್ದು, ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ವಿಜೇತ ವಿಶೇಷ ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು, ಪೋಷಕರು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ನಿರೂಪಿಸಿದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಉಮಾಶಂಕರ್ ಬಹುಮಾನ ವಿಜೇತರ ವಿವರ ವಾಚಿಸಿದರು. ಡಾ. ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ವೇತಾ ವಂದಿಸಿದರು.