Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

2025ರ ಕ್ಯೂಎಸ್ ಸಬ್ಜೆಕ್ಟ್ ಶ್ರೇಯಾಂಕದಲ್ಲಿ ಮಹತ್ವದ ಸಾಧನೆ ಮಾಡಿದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌..!!

• ಲೈಫ್ ಸೈನ್ಸಸ್ ಮತ್ತು ಮೆಡಿಸಿನ್ ವಿಭಾಗದಲ್ಲಿ 24 ಸ್ಥಾನಗಳ ಏರಿಕೆಯಾಗಿದ್ದು, ಪ್ರಸ್ತುತ ಈ ವಿಭಾಗದಲ್ಲಿ 293ನೇ ಶ್ರೇಯಾಂಕ ಪಡೆದಿದೆ.

Dhrishya News by Dhrishya News
13/03/2025
in ಮುಖಪುಟ
0
0
SHARES
12
VIEWS
Share on FacebookShare on Twitter

ಮಣಿಪಾಲ್; ಮಾರ್ಚ್ 13, 2025: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ) 2025ನೇ ಸಾಲಿನ ಕ್ವಾಕ್ವರೆಲ್ಲಿ ಸೈಮಂಡ್ಸ್ (ಕ್ಯೂಎಸ್) ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕದಲ್ಲಿ ಉತ್ತಮ ಶ್ರೇಯಾಂಕಗಳನ್ನು ಗಳಿಸಿ ಮಹತ್ತರ ಸಾಧನೆ ಮಾಡಿದೆ. ಮಾಹೆ ಎಂಟು ಸೀಮಿತ ವಿಷಯಗಳಲ್ಲಿ ಮತ್ತು ಒಂದು ವಿಸ್ತಾರ ವಿಷಯದಲ್ಲಿ ಅತ್ಯುತ್ತಮ ಶ್ರೇಯಾಂಕ ಪಡೆದಿದೆ. ಜೀವ ವಿಜ್ಞಾನ ವಿಭಾಗದಲ್ಲಿ ಈ ವರ್ಷ 293ನೇ ಸ್ಥಾನ ಗಳಿಸಿದ್ದು ವಿಶೇಷವಾಗಿದೆ. ಕಳೆದ ವರ್ಷ ಈ ವಿಷಯಕ್ಕೆ 317ನೇ ಸ್ಥಾನ ದೊರಕಿದ್ದು, ಈ ಬಾರಿ 24 ಸ್ಥಾನ ಏರಿಕೆಯಾಗಿದೆ. ಮೆಡಿಸಿನ್ ವಿಭಾಗವು 251-300ನೇ ಸ್ಥಾನದಲ್ಲಿದೆ. 

ಹೊಸ ಕ್ಯೂಎಸ್ ಶ್ರೇಯಾಂಕದಲ್ಲಿ ಮಾಹೆ, ಜೈವಿಕ ವಿಜ್ಞಾನ ಮತ್ತು ವೈದ್ಯಶಾಸ್ತ್ರ (ಲೈಫ್ ಸೈನ್ಸಸ್ ಮತ್ತು ಮೆಡಿಸಿನ್), ರಸಾಯನ ಶಾಸ್ತ್ರ (ಕೆಮಿಸ್ಟ್ರಿ), ಜೀವ ಶಾಸ್ತ್ರ (ಬಯಾಲಾಜಿಕಲ್ ಸೈನ್ಸಸ್), ಗಣಕ ವಿಜ್ಞಾನ ಮತ್ತು ಮಾಹಿತಿ ವ್ಯವಸ್ಥೆ (ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫರ್ಮೇಷನ್ ಸಿಸ್ಟಮ್ಸ್), ದಂತ ವೈದ್ಯಕೀಯ, ರಾಸಾಯನಿಕ (ಕೆಮಿಕಲ್) ಎಂಜಿನಿಯರಿಂಗ್, ವೈದ್ಯಕೀಯ (ಮೆಡಿಸಿನ್), ಔಷಧ ಹಾಗೂ ಔಷಧವಿಜ್ಞಾನ (ಫಾರ್ಮಸಿ ಆಂಡ್ ಫಾರ್ಮಕಾಲಜಿ), ಮತ್ತು ಅರ್ಥಶಾಸ್ತ್ರ ಮತ್ತು ಅರ್ಥಮಾಪನಶಾಸ್ತ್ರ (ಎಕಾನಾಮಿಕ್ಸ್ ಆಂಡ್ ಎಕನಾಮೆಟ್ರಿಕ್ಸ್‌) ನಂತಹ ಪ್ರಮುಖ ಸಬ್ಜೆಕ್ಟ್ ಗಳಲ್ಲಿ ಮನ್ನಣೆ ಗಳಿಸಿದೆ. 

ಈ ಸಾಧನೆ ಕುರಿತು ಮಾತನಾಡಿರುವ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ನ (ಮಾಹೆ) ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ. ಡಿ. ವೆಂಕಟೇಶ್ ವಿಎಸ್ಎಂ ಮಾತನಾಡಿ, “ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ) 2025ರ ಕ್ಯೂಎಸ್ ವರ್ಲ್ಡ್ ಯುನಿವರ್ಸಿಟಿ ರಾಂಕಿಂಗ್ ನಲ್ಲಿ ಶ್ರೇಷ್ಠ ಸಾಧನೆ ತೋರಿರುವುದನ್ನು ನಾವು ಗರ್ವದಿಂದ ಸಂಭ್ರಮಿಸುತ್ತಿದ್ದೇವೆ. ಈ ವರ್ಷ ನಮ್ಮ ಸಂಸ್ಥೆಯು ಶೈಕ್ಷಣಿಕ ಮತ್ತು ಸಂಶೋಧನಾ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸಿದೆ. ಜೀವ ವಿಜ್ಞಾನ ಮತ್ತು ವೈದ್ಯಕೀಯ, ರಸಾಯನಶಾಸ್ತ್ರ, ಜೀವ ವಿಜ್ಞಾನ ಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫರ್ಮೇಷನ್ ಸಿಸ್ಟಮ್ಸ್, ದಂತ ವೈದ್ಯಕೀಯ, ರಾಸಾಯನಿಕ ಎಂಜಿನಿಯರಿಂಗ್, ವೈದ್ಯಕೀಯ ನಂತಹ ವಿಷಯಗಳಲ್ಲಿ ಉತ್ತಮ ಮನ್ನಣೆ ಗಳಿಸಿದೆ. ಈ ಸಾಧನೆ ನಮ್ಮ ನಿರಂತರ ಅಭಿವೃದ್ಧಿಯನ್ನು ತೋರಿಸುತ್ತದೆ. ಜಾಗತಿಕ ಶ್ರೇಯಾಂಕದಲ್ಲಿನ ನಮ್ಮ ಸ್ಥಿರ ಸ್ಥಾನವು ನಮ್ಮ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಂಶೋಧಕರ ಬದ್ಧತೆಯನ್ನು ಪ್ರದರ್ಶಿಸುತ್ತದೆ. 2024ರ ಸಾಲಿನಲ್ಲಿ ಮೆಡಿಸಿನ್, ಫಾರ್ಮಸಿ ಆಂಡ್ ಫಾರ್ಮಕಾಲಜಿ, ಅನಾಟಮಿ ಆಂಡ್ ಫಿಸಿಯೋಲಜಿ ಮತ್ತು ದಂತ ವೈದ್ಯಕೀಯ ವಿಭಾಗಗಳಲ್ಲಿ ಮಾಹೆ ಮನ್ನಣೆ ಪಡೆದಿತ್ತು. ಈ ವರ್ಷ ಹೊಸ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ್ದು, ನಮ್ಮ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವುದನ್ನು ಈ ಸಾಧನೆಯು ತೋರಿಸಿದೆ. ಉತ್ತಮ ಶೈಕ್ಷಣಿಕ ವಾತಾವರಣ, ಸಂಶೋಧನೆ, ಮತ್ತು ಸಮಾಜ ಪರಿವರ್ತಿಸುವ ಶಿಕ್ಷಣದ ಮೂಲಕ ಕೊಡುಗೆ ನೀಡುವ ನಮ್ಮ ಬದ್ಧತೆಯನ್ನು ಈ ಮನ್ನಣೆಯು ಮತ್ತಷ್ಟು ಬಲಪಡಿಸಲಿದೆ. ಮಾಹೆ ಉನ್ನತ ಶಿಕ್ಷಣದಲ್ಲಿ ಹೊಸ ಮಾನದಂಡಗಳನ್ನು ಹಾಕಿಕೊಡಲು ಬದ್ಧವಾಗಿದೆ” ಎಂದು ಹೇಳಿದರು.

ಕಳೆದ ವರ್ಷದ ಶ್ರೇಯಾಂಕಕ್ಕೆ ಹೋಲಿಸಿದರೆ ಎರಡು ಸೂಕ್ಷ್ಮ ಸಬ್ಜೆಕ್ಟ್ ಗಳು ಈ ವರ್ಷ 400ರ ಒಳಗಿನ ಶ್ರೇಯಾಂಕ ಪಡೆದಿವೆ (ಕೆಮಿಕಲ್ ಎಂಜಿನಿಯರಿಂಗ್ ಮತ್ತು ಎಕಾನಾಮಿಕ್ಸ್ ಆಂಡ್ ಎಕನಾಮೆಟ್ರಿಕ್ಸ್). 

ಪ್ರಮುಖ ವಿಶೇಷತೆಗಳು: 

• ವಿಸ್ತಾರ ವಿಷಯ ವಿಭಾಗದಲ್ಲಿನ ಸಾಧನೆ: ಲೈಫ್ ಸೈನ್ಸಸ್ ಆಂಡ್ ಮೆಡಿಸಿನ್ ವಿಭಾಗದಲ್ಲಿ ಮಾಹೆ 293ನೇ ಶ್ರೇಯಾಂಕ ಪಡೆದಿದ್ದು, ಕಳೆದ ವರ್ಷಕ್ಕಿಂತ 24 ಸ್ಥಾನಗಳ ಏರಿಕೆ ಗಳಿಸಿದೆ.

• ಸೀಮಿತ ವಿಷಯಗಳಲ್ಲಿ ಸಾಧನೆ: 

• ಕೆಮಿಕಲ್ ಎಂಜಿನಿಯರಿಂಗ್: 401–450 ಶ್ರೇಯಾಂಕ 

• ಎಕಾನಾಮಿಕ್ಸ್ ಆಂಡ್ ಎಕನಾಮೆಟ್ರಿಕ್ಸ್: 551–700 ಶ್ರೇಯಾಂಕ

ಗಮನಾರ್ಹ ಸುಧಾರಣೆಗಳು: 

• ಫಾರ್ಮಸಿ ಆಂಡ್ ಫಾರ್ಮಕಾಲಜಿ: 101–150 ಶ್ರೇಯಾಂಕ, 50 ಸ್ಥಾನಗಳ ಏರಿಕೆ 

• ರಸಾಯನಶಾಸ್ತ್ರ: 501–550 ಶ್ರೇಯಾಂಕ, 100 ಸ್ಥಾನಗಳ ಏರಿಕೆ 

• ದಂತ ವೈದ್ಯಕೀಯ: 51–120 ಶ್ರೇಯಾಂಕದ ಉತ್ತಮ ಬ್ಯಾಂಡ್‌ನಲ್ಲಿ 

• ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫರ್ಮೇಷನ್ ಸಿಸ್ಟಮ್ಸ್: 601–650 ಶ್ರೇಯಾಂಕ 

• ಮೆಡಿಸಿನ್: 251–300 ಶ್ರೇಯಾಂಕ 

• ಬಯಾಲಾಜಿಕಲ್ ಸೈನ್ಸಸ್: 501–550 ಶ್ರೇಯಾಂಕ

ಶೈಕ್ಷಣಿಕ ಶ್ರೇಷ್ಠತೆ ಮತ್ತು ಹೊಸತನದ ಗಟ್ಟಿ ಅಡಿಪಾಯ ಹೊಂದಿರುವ ಮಾಹೆ ಶಿಕ್ಷಣದ ಭವಿಷ್ಯದ ಹಾದಿಯನ್ನು ರೂಪಿಸುತ್ತಿದೆ. 2025ರ ಕ್ಯೂಎಸ್ ವರ್ಲ್ಡ್ ಯುನಿವರ್ಸಿಟಿ ಸಬ್ಜೆಕ್ಟ್ ರಾಂಕಿಂಗ್ ನಲ್ಲಿನ ಈ ಹೊಸ ಸಾಧನೆಯು, ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ಶ್ರೇಷ್ಠತಾ ಕೇಂದ್ರವಾಗುವ ಮಾಹೆಯ ಗುರಿಸಾಧನೆಗೆ ಒಂದು ಪ್ರಮುಖ ಹೆಜ್ಜೆಯಾಗಿದೆ. 

ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಭೇಟಿ ನೀಡಿ: www.manipal.edu

About Manipal Academy of Higher Education:

Manipal Academy of Higher Education (MAHE) is an Institution of Eminence Deemed-to-be University. MAHE offers over 400 specializations across the Health Sciences (HS), Management, Law, Humanities & Social Sciences (MLHS), and Technology & Science (T&S) streams through its constituent units at campuses in Manipal, Mangalore, Bangalore, Jamshedpur, and Dubai. With a remarkable academic track record, state-of-the-art infrastructure, and significant research contributions, MAHE has earned recognition and acclaim nationally and internationally. In October 2020, the Ministry of Education, Government of India, awarded MAHE the prestigious Institution of Eminence status. Currently ranked 4th in the National Institutional Ranking Framework (NIRF), MAHE is the preferred choice for students seeking a transformative learning experience and an enriching campus life and for national & multi-national corporates looking for top talent.

###

Previous Post

ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಭೇಟಿ..!!

Next Post

ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟೊ ಅಧಿಕಾರ ಸ್ವೀಕಾರ:.ರೂಪಾ ಟಿ. ಶೆಟ್ಟಿ ವರ್ಗಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟೊ ಅಧಿಕಾರ ಸ್ವೀಕಾರ:.ರೂಪಾ ಟಿ. ಶೆಟ್ಟಿ ವರ್ಗಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved