Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯಲ್ಲಿ ಫಿಲಿಪ್ಸ್ ಐಜಿಟಿ ಇಂಜಿನಿಯರ್ಸ್ ಕ್ಲಿನಿಕಲ್ ಕನ್ಸಲ್ಟೆನ್ಸಿ..!!

Dhrishya News by Dhrishya News
21/03/2025
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಮಣಿಪಾಲ, ಮಾರ್ಚ್ 21, 2025 – ಮಾಹೆಯ ಕಾರ್ಪೊರೇಟ್ ರಿಲೇಶನ್ ಆಫೀಸ್ ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC) ಜಂಟಿಯಾಗಿ ಮಾರ್ಚ್ 20-21, 2025 ರಂದು ಫಿಲಿಪ್ಸ್ ಇಮೇಜ್ ಗೈಡೆಡ್ ಥೆರಪಿ (IGT) ಎಂಜಿನಿಯರ್‌ಗಳ ನಾಯಕತ್ವ ತಂಡಕ್ಕಾಗಿ ಕ್ಲಿನಿಕಲ್ ಕನ್ಸಲ್ಟೆನ್ಸಿ ಡೆಲಿವರಿ ಕಾರ್ಯಕ್ರಮ ನಡೆಯಿತು. ಇಮೇಜ್ ಗೈಡೆಡ್ ಥೆರಪಿ ಕುರಿತು ಲಕ್ಷ್ಯವಹಿಸಿದ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ಸಿನಿಂದ 20 ಎಂಜಿನಿಯರ್ ಗಳು ಭಾಗವಹಿಸಿದ್ದರು. ಇಂಜಿನಿಯರಿಂಗ್ ಮತ್ತು ಆರೋಗ್ಯವಲಯ ನಡುವಿನ ಅಂತರವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾದ ಈ ಕಾರ್ಯಕ್ರಮ ಕ್ಲಿನಿಕಲ್ ವ್ಯವಸ್ಥೆಗಳಲ್ಲಿ ವೈದ್ಯಕೀಯ ಸಾಧನಗಳ ಏಕೀಕರಣದ ಬಗ್ಗೆ ಭಾಗವಹಿಸುವವರ ತಿಳುವಳಿಕೆಯನ್ನು ಹೆಚ್ಚಿಸಿತು.

ಎರಡು ದಿನಗಳ ಕಾರ್ಯಕ್ರಮದಲ್ಲಿ ಕೆಎಂಸಿ ಅಧ್ಯಾಪಕರು ಹೃದಯದ ಮತ್ತು ರೇಡಿಯಾಲಜಿ ಸಾಧನದ ಕಾರ್ಯಚಟುವಟಿಕೆಗಳು ಮತ್ತು ಅಪ್ಲಿಕೇಶನ್‌ಗಳ ಕುರಿತು ತರಗತಿಯ ಅವಧಿಗಳನ್ನು ನಡೆಸಿದರು. ಸುಧಾರಿತ ತಂತ್ರಜ್ಞಾನಗಳೊಂದಿಗೆ ತರಬೇತಿಯು ರೋಗಿಗಳ ಆರೈಕೆಯಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸಿತು.

ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) M. D. ವೆಂಕಟೇಶ್, (VSM) ಅವರು, ಆರೋಗ್ಯ ರಕ್ಷಣೆಯ ಪ್ರಗತಿಗಾಗಿ ತಂತ್ರಜ್ಞಾನ ಮತ್ತು ಔಷಧವನ್ನು ಸಂಯೋಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅವರು ಎಐ-ಚಾಲಿತ ರೋಗನಿರ್ಣಯ ಮತ್ತು ರಿಮೋಟ್ ಮಾನಿಟರಿಂಗ್ ವ್ಯವಸ್ಥೆಯನ್ನು ರೂಪಿಸುವ ಬಗ್ಗೆ ಹೇಳಿದರು. ಈ ಕಾರ್ಯಕ್ರಮವು ಫಿಲಿಪ್ಸ್ ಎಂಜಿನಿಯರ್‌ಗಳಿಗೆ ಆರೋಗ್ಯ ವ್ಯವಸ್ಥೆಯಲ್ಲೊ ಪ್ರಗತಿಯನ್ನು ಹೆಚ್ಚಿಸಲು ಮತ್ತು ರೋಗಿಗಳಲ್ಲಿ ಫಲಿತಾಂಶಗಳನ್ನು ಸುಧಾರಿಸಲು ಪೂರಕವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಹೆಯ ಪ್ರೊ.ವೈಸ್ ಚಾನ್ಸಲರ್ ಡಾ.ನಾರಾಯಣ ಸಭಾಹಿತ್ ಅವರು ಮಾತನಾಡಿ, ಪಠ್ಯಕ್ರಮದ ಸಹಯೋಗ, ತಾಂತ್ರಿಕ ಕೌಶಲಗಳನ್ನು ಬಲಪಡಿಸುವುದು, ವೈದ್ಯಕೀಯ ಅಭ್ಯಾಸದ ಮೇಲೆ ತಾಂತ್ರಿಕ ಆವಿಷ್ಕಾರಗಳ ಪ್ರಭಾವದ ತಿಳುವಳಿಕೆಯನ್ನು ಉತ್ತೇಜಿಸುವುದು, ಆರೋಗ್ಯ ಸವಾಲುಗಳಿಗೆ ಉದ್ದೇಶಿತ ಪರಿಹಾರಗಳನ್ನು ನೀಡಲು ಇದು ಪೂರಕವಾಗಿದೆ ಎಂದರು.

ಮಾಹೆ ರಿಜಿಸ್ಟ್ರಾರ್ ಡಾ. ಗಿರಿಧರ್ ಪಿ. ಕಿಣಿ ಅವರು ಮಾತಾಡಿ, ವೈದ್ಯಕೀಯ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ಮತ್ತು ರೋಗಿಗಳ ಮೇಲಿನ ಫಲಿತಾಂಶಗಳನ್ನು ಹೆಚ್ಚಿಸುವಲ್ಲಿ ತಂತ್ರಜ್ಞಾನದ ನಿರ್ಣಾಯಕ ಪಾತ್ರವನ್ನು ಹೇಳಿದರು ಮತ್ತು ಮಾಹೆಯಲ್ಲಿ ಅಂತರಶಿಸ್ತೀಯ ಸಂಶೋಧನೆಯನ್ನು ಅನ್ವೇಷಿಸಲು ಪ್ರೋತ್ಸಾಹಿಸಿದರು.

ಮಾಹೆ ಕಾರ್ಪೊರೇಟ್ ರಿಲೇಷನ್ ನಿರ್ದೇಶಕ ಡಾ.ಹರೀಶ್ ಕುಮಾರ್ ಸ್ವಾಗತಿಸಿದರು. ಡಾ. ವಿನೋದ್ ಸಿ.ನಾಯಕ್ ಅವರು ಇಮೇಜ್ ಗೈಡೆಡ್ ಥೆರಪಿಯ ಸಂಕೀರ್ಣತೆಗಳ ಕುರಿತ ಕಾರ್ಯಕ್ರಮದ ಕಾರ್ಯಸೂಚಿಯನ್ನು ವಿವರಿಸಿದರು.

ಡಾ.ಅವಿನಾಶ್ ಶೆಟ್ಟಿ, ಡಾ.ರಾಜಗೋಪಾಲ್, ಡಾ.ಗಣೇಶ್, ಡಾ.ಅಭಿಮನ್ಯು ಪ್ರಧಾನ್, ಡಾ.ಹರ್ಷಿತ್ ಸೇರಿದಂತೆ ಗಣ್ಯರು ತಮ್ಮ ಅನುಭವ ಹಂಚಿಕೊಂಡರು. 

ಮಾಹೆ “ಇಂಡಸ್ಟ್ರಿ-ಅಕಾಡೆಮಿ ಸಹಯೋಗಗದಲ್ಲಿ “ಶ್ರೇಷ್ಠತೆಯ ವರ್ಷ” ವನ್ನು ಆಚರಿಸುತ್ತಿರುವಂತೆ, ಈ ಕಾರ್ಯಕ್ರಮವು ಶೈಕ್ಷಣಿಕ ಮತ್ತು ಉದ್ಯಮದ ಸೇತುವೆಗೆ ತನ್ನ ಬದ್ಧತೆಯನ್ನು ಉದಾಹರಿಸಿದೆ. ತಾಂತ್ರಿಕ ಆವಿಷ್ಕಾರಗಳನ್ನು ನೈಜ-ಪ್ರಪಂಚದ ಆರೋಗ್ಯ ಪರಿಹಾರಗಳಿಗೆ ಪೂರಕವನ್ನಾಗಿಸಿ ವೈದ್ಯಕೀಯ ತಂತ್ರಜ್ಞಾನದ ಪ್ರಗತಿಗೆ ಇದು ದಾರಿ ಮಾಡಿಕೊಡುತ್ತದೆ.

Previous Post

ಕಾರ್ಕಳ :ಮುಂಡ್ಲಿ ಆಣೆಕಟ್ಟಿನಲ್ಲಿ  ಕುಸಿಯುತಿರುವ ನೀರಿನ ಮಟ್ಟ: ನೀರನ್ನು  ಮಿತವಾಗಿ ಬಳಸಿ ಸಹಕರಿಸುವಂತೆ  ಪುರಸಭಾ ಮುಖ್ಯ ಅಧಿಕಾರಿ ಲೀನಾ ಬ್ರಿಟ್ಟೋ ಮನವಿ..!

Next Post

ಕುಂದಾಪುರ :ಮಹಿಳೆಯ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಕಕಳ್ಳತನ ಪ್ರಕರಣದ ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ :ಮಹಿಳೆಯ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಕಕಳ್ಳತನ ಪ್ರಕರಣದ ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved