ಕಾರ್ಕಳ:ಏಪ್ರಿಲ್ 25 : ಈ ದೇಶವನ್ನು ಇಸ್ಲಂ ರಾಷ್ಟ್ರ ಮಾಡಬೇಕೆನ್ನುವ ಹೊಂಚು ನಡೆಯುತ್ತಿದೆ. ನಮ್ಮ ಮುಂದಿನ ಪೀಳಿಗೆ ಹಿಂದೂವಾಗಿ ಉಳಿಯಬೇಕಾದರೇ ಹಿಂದುಗಳಾದ ನಾವೆಲ್ಲರೂ ಜಾಗೃತರಾಗಬೇಕಾಗಿದೆ. ನಿರಂತರವಾಗಿ ಹಿಂದೂಗಳ ಮೇಲೆ ದಾಳಿಯಾಗುತ್ತಿದೆ.
ಸ್ವಾಭಿಮಾನಿ ಹಿಂದೂ ಸಮಾಜ ನಿರ್ಮಾಣವಾದರೇ ಮಾತ್ರ ಇದ್ದಕ್ಕೆ ತಕ್ಕ ಉತ್ತರ ನೀಡಲು ಸಾಧ್ಯ. ನಮ್ಮ ಗ್ರಾಮ ಗ್ರಾಮಗಳಲ್ಲಿ ಹಿಂದೂ ವಿರೋಧಿಗಳು, ಜಿಹಾದಿಗಳು ಇರಬಹುದು ಎಚ್ವರ ವಹಿಸುವುದು ಅಗತ್ಯ ಎಂದು ಹಿಂದೂ ಮುಖಂಡ ಸುನಿಲ್ ಕೆ.ಆರ್ ಹೇಳಿದರು.
ಅವರು ಕಾರ್ಕಳ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧ ಮತ್ತು ಜಿಹಾದಿ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿ ಬಸ್ ನಿಲ್ದಾಣ ಬಳಿಯಲ್ಲಿ ನಡೆಯ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ನವೀನ್ ನಾಯಕ್, ಅವಿನಾಶ್ ಶೆಟ್ಟಿ, ಚೇತನ್ ಮತ್ತಿತರರು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.