ಮಂಗಳೂರು: ಏಪ್ರಿಲ್ 26: ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣಪಥಗಳು ಪ್ರವಾಸಿಗರ ಚಾರಣಕ್ಕೆ ಮುಕ್ತ ವಾಗಿರಲಿದೆ
ಕಾಳ್ಗಿಚ್ಚಿನ ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್ಗಳನ್ನು ಪ್ರಸ್ತುತ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸಂಭವಿಸಿರುವ ಹಿನ್ನೆಲೆ, ಮೇ 1ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ
ಪ್ರವಾಸಿಗರು ಆನ್ಲೈನ್ aranyavihara.karnataka.gov.in ಮೂಲಕ ಟಿಕೆಟ್ ಕಾಯ್ದಿರಿಸಿ ಚಾರಣ ಮಾಡಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.