Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಲೋಕಾರ್ಪಣೆ..!!

Dhrishya News by Dhrishya News
27/04/2025
in ಮುಖಪುಟ, ಸುದ್ದಿಗಳು
0
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಲೋಕಾರ್ಪಣೆ..!!
0
SHARES
26
VIEWS
Share on FacebookShare on Twitter

ಮಣಿಪಾಲ, ಏಪ್ರಿಲ್ 26, 2025: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE- ಮಾಹೆ), ಮಣಿಪಾಲದಲ್ಲಿ ಭಾರತದಲ್ಲಿಯೇ ವಿಶಿಷ್ಟವೆನಿಸುವ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (MHRC) ಅನ್ನು ಇದೇ ಏಪ್ರಿಲ್ 30, 2025ರಂದು ಆಂಧ್ರ ಪ್ರದೇಶ ರಾಜ್ಯಪಾಲರಾದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ.

ಈ ಕೇಂದ್ರ ವು ಜುಲೈ 2025ರಿಂದ ಸೇವೆಗೆ ತೆರೆದುಕೊಳ್ಳಲಿದೆ. ಮಾಹೆಯ ಅತ್ಯುನ್ನತ ಸಮಾಜಮುಖಿ ಯೋಜನೆಯಾದ ಇದು, ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಗಂಭೀರವಾದ ಕಾಯಿಲೆಯಿಂದ ಬಳಲಿಯುತ್ತಿರುವ ರೋಗಿಗಳು ಮತ್ತು ಅವರ ಕುಟುಂಬದವರು ಈ ಕೇಂದ್ರದಲ್ಲಿ ಉಳಿದುಕೊಳ್ಳಬಹುದಾಗಿದೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ), ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಇಂಡಿಯನ್ ಅಸೋಸಿಯೇಷನ್ ​​ಆಫ್ ಪ್ಯಾಲಿಯೇಟಿವ್ ಕೇರ್ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸುವಂತೆ ಈ ಯೋಜನೆಯನ್ನು ರೂಪಿಸಲಾಗಿದೆ. ತರಬೇತಿ ಪಡೆದ ವೈದ್ಯರು, ನರ್ಸ್, ಮನಶಾಸ್ತ್ರಜ್ಞರು, ಸಮಾಜ ಕಾರ್ಯಕರ್ತರು ಮತ್ತು ಅನೇಕ ಎನ್ ಜಿ ಓ ಗಳು ಸಹ ಇದಕ್ಕೆ ನೆರವು ನೀಡುತ್ತಿವೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಕೇವಲ 4.5 ಕಿ.ಮೀ. ಮತ್ತು NH-66 ನಿಂದ 4 ಕಿ.ಮೀ. ದೂರದಲ್ಲಿ ಸ್ವರ್ಣಾನದಿಯ ಶಾಂತವಾದ ದಡದಲ್ಲಿ, 12 ಎಕರೆ ವಿಸ್ತಾರದ ಹಸಿರು ಕ್ಯಾಂಪಸ್ಸಿನಲ್ಲಿ ಈ ಮಣಿಪಾಲ್ ಹಾಸ್ಪೈಸ್ ಮತ್ತು ರಿಸ್ಪ್ಟ್ ಸೆಂಟರ್ (MHRC) ಕೇಂದ್ರ ಇದೆ.

ಕೇಂದ್ರದ ಉದ್ಘಾಟನೆಯ ಕುರಿತಾಗಿ ಮಾತನಾಡಿದ ಮಾಹೆಯ ಪ್ರೊ-ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅವರು, “ನಮ್ಮ ಬದ್ಧತೆಯು ಯಾವಾಗಲೂ ಗುಣಮಟ್ಟದ ಶಿಕ್ಷಣ ಮತ್ತು ಸಂಶೋಧನೆಯನ್ನು ಒದಗಿಸುವ ಜೊತೆ ಜೊತೆಗೆ ಸಮಾಜಕ್ಕೆ ನೆರವಾಗುವ ಮತ್ತು ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವುದನ್ನು ಒಳಗೊಂಡಿದೆ. ಇದರ ಹಿಂದಿನ ಕಲ್ಪನೆಯು ವೈದ್ಯಕೀಯ ಉತ್ಕೃಷ್ಟತೆಯೊಂದಿಗೆ ಜೀವನ ಸೀಮಿತ ಪರಿಸ್ಥಿತಿ ಎದುರಿಸುತ್ತಿರುವವರಿಗೆ ಸಹಾನುಭೂತಿಯ ಆರೈಕೆ ಮತ್ತು ರೋಗಿ ಕೇಂದ್ರಿತ ಆರೈಕೆಯನ್ನು ಒದಿಗುಸುವುದಾಗಿದೆ. ದೈಹಿಕ ಆರೈಕೆಯ ಜೊತೆಗೆ ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ಪೋಷಿಸುವಂತೆ ಕೇಂದ್ರವನ್ನು ವಿನ್ಯಾಸಗೊಳಿಸಲಾಗಿದೆ, ಇದು ರೋಗದ ಗುಣಪಡಿಸುವಿಕೆಯಲ್ಲದೆ, ಇಡೀ ವ್ಯಕ್ತಿಯನ್ನು ಒಳಗೊಂಡಿರಬೇಕು ಎಂಬ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

ಕೇಂದ್ರದ ಉದ್ಘಾಟನೆಗೆ ತಮ್ಮ ಸಂತಸವನ್ನು ವ್ಯಕ್ತಪಡಿಸಿರುವ, ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂಡಿ ವೆಂಕಟೇಶ್, ವಿಎಸ್‌ಎಂ (ನಿವೃತ್ತ) ಅವರು”ಎಮ್‌ಎಚ್‌ಆರ್ ಸಿ ವಿಶೇಷವಾಗಿ, ಜನರಿಗೆ ನೆರವು ನೀಡುವ ಮತ್ತು ಶೈಕ್ಷಣಿಕವಾಗಿಯೂ ಮುಖ್ಯವಾಗಿರುವ ಆರೋಗ್ಯ ಸೇವೆ ನೀಡುವ ನಮ್ಮ ಧ್ಯೇಯವನ್ನು ಮುನ್ನಡೆಸುವ ಒಂದು ಮಾರ್ಗವಾಗಿದೆ. ವೈದ್ಯಕೀಯ ಕಾಲೇಜು ಮತ್ತು ತೃತೀಯ ಆಸ್ಪತ್ರೆ ಎರಡಕ್ಕೂ ಸಂಯೋಜಿತವಾಗಿರುವ ಭಾರತದ ಏಕೈಕ ವಿಶ್ರಾಂತಿ ಧಾಮವಾಗಿದೆ, ಭವಿಷ್ಯದ ಆರೈಕೆದಾರರ ತರಬೇತಿಗೆ ಪೂರಕವಾಗಿರುವುದರೊಂದಿಗೆ ಸುಧಾರಿತ ಉಪಶಾಮಕ ಆರೈಕೆಯನ್ನು ಒದಗಿಸಲು ಸಿದ್ಧವಾಗಿದೆ. ಈ ಉಪಕ್ರಮದ ಮೂಲಕ ನೀಡಲಾಗುವ ಸೇವೆಗಳನ್ನು ಗಂಭೀರ ಮತ್ತು ಜೀವನ-ಸೀಮಿತ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ರೋಗಿಗಳು ಮತ್ತು ಕುಟುಂಬಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಒದಗಿಸಲಾಗುತ್ತದೆ” ಎಂದರು.

ಮಾಹೆಯ ಆರೋಗ್ಯ ವಿಜ್ಞಾನಗಳ ಪ್ರೊ ವೈಸ್‌ ಚಾನ್ಸಲರ್ ಡಾ.ಶರತ್ ಕೆ ರಾವ್, ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರೊ ವೈಸ್ ಚಾನ್ಸಲರ್ ಡಾ. ನಾರಾಯಣ ಸಭಾಹಿತ್, ಮುಖ್ಯ ಕಾರ್‍ಯನಿರ್ವಣಾಧಿಕಾರಿ ಡಾ. ರವಿರಾಜ ಎನ್ಎಸ್, ಮಾಹೆಯ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಮತ್ತು ಉಪಶಾಮಕ ಔಷಧ ಮತ್ತು ಸಪೋರ್ಟಿವ್ ಕೇರ್ ವಿಭಾಗದ ಮುಖ್ಯಸ್ಥ ಡಾ.ನವೀನ್ ಸಾಲಿನ್ಸ್ ಮತ್ತು ಮಣಿಪಾಲ ಹಾಸ್ಪೈಸ್ ಮತ್ತು ರಿಸ್ಪ್ಟ್ ಸೆಂಟರ್ (ಎಂಎಚ್‌ಆರ್‌ಸಿ) ನಿರ್ದೇಶಕಿ ಡಾ.ಸೀಮಾ ರಾಜೇಶ್ ರಾವ್ ಮಾತನಾಡಿದರು

ಸಂಶೋಧನೆ ಮತ್ತು ಶಿಕ್ಷಣದೊಂದಿಗೆ ಸುಧಾರಿತ ಉಪಶಾಮಕ ಆರೈಕೆಯ ವಿಶಿಷ್ಟತೆಯೊಂದಿಗೆ ಎಮ್ಎಚ್ ಆರ್ ಸಿ ಇತರ ವಿಶ್ರಾಂತಿ ಧಾಮಗಳಿಗಿಂತ ಭಿನ್ನವಾಗಿದೆ. ಈ ಸೌಲಭ್ಯವನ್ನು ವೈದ್ಯಕೀಯ ಕಾಲೇಜು ಮತ್ತು ತೃತೀಯ ಆರೈಕೆ ಆಸ್ಪತ್ರೆಯೊಂದಿಗೆ ಜೋಡಿಸಲಾಗಿದ್ದು, ಭಾರತ ಏಕೈಕ ವಿಶ್ರಾಂತಿ ಧಾಮವಾಗಿರಲಿದೆ. ಇದು ಕ್ಯಾನ್ಸರ್ ಮತ್ತು ಕ್ಯಾನ್ಸರೇತರ ಪರಿಸ್ಥಿತಿಗಳಲ್ಲೂ ರೋಗಿಗಳ ಆರೈಕೆಗೆ ಪೂರಕವಾಗಿದೆ. ಮುಂದಿನ ಪೀಳಿಗೆಯ ಉಪಶಾಮಕ ಆರೈಕೆ ತಜ್ಞರಿಗೆ ತರಬೇತಿ ನೀಡುವಾಗ ಎಮ್‌ಎಚ್ ಆರ್ ಸಿ ನವೀನ ಆರೈಕೆ ಮಾದರಿಗಳನ್ನು ಒದಗಿಸಲಿದೆ.

Previous Post

ಉಡುಪಿ : ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಏಪ್ರಿಲ್ 28, 29, 30 ರಂದು ಉಚಿತ ಶಬ್ದ ಪ್ರೇರಿತ ಶ್ರವಣದೋಷ ಶಿಬಿರ..!!

Next Post

ಹೆಬ್ರಿ : ಸೀತಾನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹೆಬ್ರಿ : ಸೀತಾನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು..!!

ಹೆಬ್ರಿ : ಸೀತಾನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ  ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

17/05/2025
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

17/05/2025
ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!       

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

17/05/2025
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

17/05/2025

Recent News

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ  ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

17/05/2025
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

17/05/2025
ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!       

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

17/05/2025
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

17/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved