ಉಡುಪಿ: ಏಪ್ರಿಲ್ 30:ಆಪತ್ಭಾಂದವ ಈಶ್ವರ್ ಮಲ್ಪೆ ಯವರು ತಮ್ಮ ಪುತ್ರನ ಸವಿನೆನಪಿಗಾಗಿ ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸೇವೆಗಾಗಿ ಅಗತ್ಯ ಜೀವರಕ್ಷಕ ಸೌಲಭ್ಯಗಳ ಸಹಿತ ಐಸಿಯು ವ್ಯವಸ್ಥೆ ಹೊಂದಿರುವ ನೂತನ ಆಂಬ್ಯುಲೆನ್ಸ್ ಅನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಲೋಕಾರ್ಪಣೆ ಮಾಡಿ ಆಶೀರ್ವದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಹಾಗೂ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮೊದಲಾದ ಗಣ್ಯರು ಉಪಸ್ಥಿತರಿದ್ದರು.