Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಮೇ ದಿನಾಚರಣೆ : ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ..!!

Dhrishya News by Dhrishya News
01/05/2025
in ಸುದ್ದಿಗಳು
0
ಉಡುಪಿಯಲ್ಲಿ ಮೇ ದಿನಾಚರಣೆ : ಮೇ 20 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಕರೆ..!!
0
SHARES
16
VIEWS
Share on FacebookShare on Twitter

ಉಡುಪಿ;ಮೇ 01; ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳಾದ 2019 ರಲ್ಲಿ ವೇತನ ಸಂಹಿತೆ,2020 ರಲ್ಲಿ ಔದ್ಯೋಗಿಕ ಸುರಕ್ಷತೆ -ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಕೈಗಾರಿಕಾ ಸಂಬಂಧಗಳ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆಗಳನ್ನು ಕೇಂದ್ರ ಸರ್ಕಾರ ತಂದಿರುವುದು ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ದೇಶದ ದ್ರೋಹದ ನೀತಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅವರು ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ನಡೆದ ಮೇ ದಿನಾಚರಣೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಸಂಹಿತೆಗಳ ಹೆಸರು ಕಾರ್ಮಿಕರ ರಕ್ಷಿಸುವಂತೆ ಇದ್ದರೂ ವಾಸ್ತವವಾಗಿ ಅದು ಕೇಂದ್ರ ಸರ್ಕಾರ ತನ್ನ ಕಾರ್ಪೋರೇಟ್ ಯಜಮಾನರಿಗೆ ಸೇವೆ ಸಲ್ಲಿಸಲು ಕಾರ್ಮಿಕರ ದುಡಿಮೆಯ ಲೂಟಿಯನ್ನು ಕಾನೂನುಬದ್ಧ ಗೊಳಿಸುವ ಅಂಶಗಳಿವೆ ಮಾಲಕರು ಕಾರ್ಮಿಕರ ಮೇಲೆ ನಡೆಸುವ ಶೋಷಣೆಗೆ ರಿಯಾಯಿತಿ ನೀಡಿ ಕಾರ್ಮಿಕರ ಪ್ರತಿಭಟನೆ, ಮುಷ್ಕರ,ಮನವಿ ನೀಡುವುದು ಸಂಘಟಿತ ಅಪರಾಧ ಎಂದು ಶಿಕ್ಷೆ ಕೊಡುವುದನ್ನೆ ಮೋದಿಯವರು ಶ್ರಮಯೇವ ಜಯತೆ ಎನ್ನುತ್ತಿರುವುದು ದುರದ್ರಷ್ಟಕರ ಅಲ್ಲದೇ ಇದು ಕಾರ್ಮಿಕ ವರ್ಗಕ್ಕೆ ನೀಡಲಾಗು ಮರಣದಂಡನೆಯಾಗಿದೆ ಈ ಮರಣ ದಂಡನೆಯಿಂದ ಕಾರ್ಮಿಕರನ್ನು ರಕ್ಷಿಸಲು ಮೇ -20 ಕೇಂದ್ರ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ ಜಿಲ್ಲೆಯ ಸಾರ್ವಜನಿಕರು ಬೆಂಬಲಿಸಬೇಕೆಂದು ಕರೆ ನೀಡಿದರು.

ಎಂಟು ಗಂಟೆ ದುಡಿಮೆ,ಎಂಟು ಗಂಟೆ ವಿಶ್ರಾಂತಿ,ಎಂಟು ಗಂಟೆ ಮನೋರಂಜನೆ ಎಂಬ ಐತಿಹಾಸಿಕ ಹೋರಾಟ ಮೇ ತಿಂಗಳಲ್ಲಿ ಜಗತ್ತಿನಾದ್ಯಂತ ನಡೆದಿರುವುದನ್ನು ನೆನಪಿಸಿದ ಅವರು ರಾಜ್ಯದಲ್ಲಿ ಎಂಟು ಗಂಟೆಯಿಂದ 12 ಗಂಟೆಗೆ ಹೆಚ್ಚಳ ಮಾಡಿರುವುದು ಕಾರ್ಮಿಕ ವಿರೋಧಿಯಾಗಿದೆ, ಬೆಲೆಯೇರಿಕೆ, ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ದೇಶದಲ್ಲಿ ಮತ್ತೊಂದು ಮೇ ಹೋರಾಟಗಳನ್ನು ಮರುಕಳಿಸಬೇಕು ಎಂದು ಅವರು ಹೇಳಿದರು.

ಸಭೆಯನ್ನುದ್ದೇಶಿಸಿ ಇಂಟಕ್ ಕಾರ್ಮಿಕ ಸಂಘಟನೆಯ ಕಿರಣ್ ಹೆಗ್ಡೆ, ಎಐಟಿಯುಸಿ ಸಂಘಟನೆಯ ಶಿವಾನಂದ, ಬ್ಯಾಂಕ್ ನೌಕರರ ಸಂಘಟನೆ(ಎಐಬಿಇಎ) ಜಿಲ್ಲಾ ಸಂಚಾಲಕರು ನಾಗೇಶ್ ನಾಯಕ್ ಮಾತನಾಡಿದರು. ರಮೇಶ್, ಉಮೇಶ್ ಕುಂದರ್,

ಭಾರತಿ,ಶೇಖರ ಬಂಗೇರ,ಶಶಿಧರ ಗೊಲ್ಲ,ಸಂಜೀವ ಬಳ್ಕೂರು, ಜಯನ್ ಮಲ್ಪೆ,ನಳಿನಿ,ಸರೋಜ,ಸಯ್ಯದ್, ಮುರುಳಿ, ರಮೇಶ್, ಮೋಹನ್,ದಯಾನಂದ ಕೋಟ್ಯಾನ್,ಗಣೇಶ್ ನಾಯಕ್,ವಾಮನ ಪೂಜಾರಿ ಇದ್ದರು.

ಮೆರವಣಿಗೆಯಲ್ಲಿ ನೂರಾರು ಮಂದಿ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯಿಂದ ಹೊರಟು ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಬಹಿರಂಗ ಸಭೆ ನಡೆಯಿತು.

ಸಭೆಯಲ್ಲಿ ಜೆಸಿಟಿಯು ಜಿಲ್ಲಾ ಸಂಚಾಲಕ ಕವಿರಾಜ್ ಎಸ್ ಕಾಂಚನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ವಿಮಾ ನೌಕರರ ಸಂಘ(ಎಐಐಇಎ) ಕಾರ್ಯದರ್ಶಿ ಕೆ ವಿಶ್ವನಾಥ್ ವಂದಿಸಿದರು.

Previous Post

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ.!!

Next Post

ಸಿಐಟಿಯು  ಕಾರ್ಕಳದಲ್ಲಿ  ಅಂತರ್ ರಾಷ್ಟೀಯ ಕಾರ್ಮಿಕ ದಿನದ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿಐಟಿಯು  ಕಾರ್ಕಳದಲ್ಲಿ  ಅಂತರ್ ರಾಷ್ಟೀಯ ಕಾರ್ಮಿಕ ದಿನದ ಆಚರಣೆ..!!

ಸಿಐಟಿಯು  ಕಾರ್ಕಳದಲ್ಲಿ  ಅಂತರ್ ರಾಷ್ಟೀಯ ಕಾರ್ಮಿಕ ದಿನದ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved