ಕೊಲ್ಲೂರು: ಮೇ 07: ಕಾಂತಾರಾ – 1 ಚಿತ್ರದ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ಸಾವಿಗೀಡಾಗಿದ್ದಾರೆ. ಸಾವಿಗೀಡಾದ ದುರ್ದೈವಿಯನ್ನು ಕಪಿಲ್ ಎಂದು ಗುರುತಿಸಲಾಗಿದೆ. ಇವರು ಕೇರಳ ಮೂಲದವರಾಗಿದ್ದು ಅವರನ್ನು ಈ ಚಿತ್ರದಲ್ಲಿ ಜೂನಿಯರ್ ಕಲಾವಿದರಾಗಿ ಅವರು ಅಭಿನಯಿಸುತ್ತಿದ್ದರು.
ಮೇ 6ರಂದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಪುಣ್ಯಕ್ಷೇತ್ರದ ಬಳಿಯ ಸೌಪರ್ಣಿಕಾ ನದಿಯಲ್ಲಿ ಶೂಟಿಂಗ್ ನಡೆಸಲಾಗುತ್ತಿತ್ತು. ಶೂಟಿಂಗ್ ಮುಗಿದ ಮೇಲೆ ಸಂಜೆ ನದಿಯಲ್ಲಿ ಈಜಾಡಲು ಹೋಗಿದ್ದಾಗ ಕಪಿಲ್ ಅವರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ದಾರುಣ ಸಾವಾಗಿದೆ. ಶೂಟಿಂಗ್ ಮುಗಿಸಿ ಸೌಪರ್ಣಿಕ ನದಿಗೆ ಈಜಲು ಹೋಗಿದ್ದಾಗ ಕಪಿಲ್ ಹಾಗೂ ಅವರ ತಂಡದವರು ನೀರಿನ ಆಳ ತಿಳಿಯದೆ ಮುಳುಗಿ ಸಾವಿಗೀಡಾಗಿದ್ದಾರೆ.
ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿತ್ತು. ಅವರ ಜೊತೆಗೆ ಈಜಲು ಹೋಗಿದ್ದವರು ಕೂಡಲೇ ನದಿಯಿಂದ ಆಚೆ ಬಂದು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರನ್ನು ನೀಡಿದ್ದಾರೆ. ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಈಜುಪಟುಗಳೊಂದಿಗೆ ಸ್ಥಳಕ್ಕೆ ಬಂದ ಪೊಲೀಸರು ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ರಾತ್ರಿ 7 ಗಂಟೆಯ ಸುಮಾರಿಗೆ ಕಪಿಲ್ ಅವರ ಶವವನ್ನು ಪತ್ತೆ ಮಾಡಿ ನದಿಯಿಂದ ಹೊರಗೆಳೆದಿದ್ದಾರೆ.
ಕಪಿಲ್ ಅವರ ಪಾರ್ಥೀವ ಶರೀರವನ್ನು ಬೈಂದೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಾಳೆ (ಮೇ 7) ಅವರ ಕುಟುಂಬಸ್ಥರು ಬಂದ ನಂತರ ಕಪಿಲ್ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ