ಉಡುಪಿ, ಮೇ 09: ಮಂಗಳೂರಿನ ಬಂಗ್ರ ಕೂಳೂರು ಗೋಲ್ಡ್ಪಿಂಚ್ ಮೈದಾನದಲ್ಲಿ ಮೇ 10 ರಂದು ನಡೆಯಲಿರುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ರಜತ ಸಂಭ್ರಮ ಕಾರ್ಯ ಕ್ರಮಕ್ಕೆ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗುತ್ತಿದೆ
ಈ ಹಿನ್ನೆಲೆಯಲ್ಲಿ ಈ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ದಾಪುರ, ಬೈಂದೂರು ಹಾಗೂ ಭಟ್ಕಳ ವಲಯಗಳ ಸಾರಿಗೆ ಕಾರ್ಯಾ ಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ. ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.