ಕಾರ್ಕಳ : ಮೇ 11: ಪಾಕಿಸ್ತಾನದ ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ನಡೆದ ಭಾರತದ ಆಫರೇಷನ್ ಸಿಂದೂರ ಕಾರ್ಯಾಚರಣೆಗೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾರ್ಕಳದಲ್ಲಿ ಮಂಡಲ ಬಿಜೆಪಿ ನೇತೃತ್ವದಲ್ಲಿ ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಬೆಂಬಲಿಸಿ ದೇಶದ ಸೈನಿಕರಿಗೆ ಶುಭಕೋರಿ ಮೇ 9ರಂದು ಸಂಜೆ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿರುವ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ ನಡೆಯಿತು.
ಬೆಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಘೋಷಣೆಯೊಂದಿಗೆ ಸಾಗಿ ಬಂದು ದೇವಸ್ಥಾನದಲ್ಲಿ ಭಜನೆ, ಮಹಾಮಂಗಳಾರತಿ ನೆರವೇರಿಸಲಾಯಿತು.
ಶಾಸಕ ವಿ. ಸುನಿಲ್ ಕುಮಾರ್, ಪಕ್ಷದ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್, ರಾಮಚಂದ್ರ ನಾಯಕ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಯುವಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ತಾಲೂಕು ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಬಿಜೆಪಿ ಮಹಾಳಾ ಮೋರ್ಚಾ ತಾಲೂಕು ಅಧ್ಯಕ್ಷೆ ವಿನಯ ಡಿ. ಬಂಗೇರ, ಒಬಿಸಿ ಮೊರ್ಚಾ ಕಾರ್ಕಳ ತಾಲೂಕು ಅಧ್ಯಕ್ಷ ಪ್ರಸಾದ್ ಐಸಿರ, ಪುರಸಭಾ ಅಧ್ಯಕ್ಷ ಯೋಗಿಶ್ ದೇವಾಡಿಗ, ರವಿಪ್ರಕಾಶ್ ಪ್ರಭು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.