ಕಾರ್ಕಳ:ಮೇ 11:ಕಳೆದ ಎರಡು ವರ್ಷಗಳ ಹಿಂದೆ ಹೆದ್ದಾರಿ ಇಲಾಖೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಬಸ್ಸು ನಿಲ್ದಾಣಗಳನ್ನು ಕೆಡವಿ ಹಾಕಿದ್ದರು.ಹೊಸ ಬಸ್ಸು ನಿಲ್ದಾಣ ಆಗುವವರೆಗೆ ಕನಿಷ್ಠ ತಾತ್ಕಾಲಿಕ ಬಸ್ಸು ನಿಲ್ದಾಣಗಳನ್ನು ಕೂಡ ನಿರ್ಮಾಣ ಮಾಡಿಲ್ಲ.ಗ್ರಾಮಸ್ಥರು ಅಪಾಯಕಾರಿ ಸ್ಥಿತಿಯಲ್ಲಿ ಬೇಸಿಗೆಯಲ್ಲಿ ಪ್ರಖರ ಬಿಸಿಲಿಗೆ ಮೈಯೊಡ್ಡಿ ಹಾಗೂ ಮಳೆಗಾಲದಲ್ಲಿ ಗಾಳಿ ಮಳೆಗೆ ಬಸ್ಸಿಗಾಗಿ ಕಾಯುವ ದಯನೀಯ ಪರಿಸ್ಥಿತಿ ಇಲ್ಲಿ ನಿರ್ಮಾಣ ವಾಗಿದೆ
ಹತ್ತಾರು ಬಾರಿ ಶಾಸಕರು ,ಸಂಸದರು, ಜಿಲ್ಲಾಧಿಕಾರಿ ,ರಾಷ್ಟ್ರೀಯ ಹೆದ್ದಾರಿ ಇಲಾಖೆಯವರಿಗೆ ಈ ಬಗ್ಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಇದೀಗ ಸಾಣೂರಿನ ಜನತೆ ಸಂಬಂಧಪಟ್ಟವರ ನಿರ್ಲಕ್ಷತನಕ್ಕೆ ಬೇಸತ್ತು ಭಾರೀ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಒಂದು ವಾರದ ಒಳಗೆ ಹೊಸ ಬಸ್ಸು ನಿಲ್ದಾಣಕ್ಕೆ ಸ್ಥಳ ಗುರುತಿಸಿ ನಿರ್ಮಾಣ ಕಾರ್ಯ ಆರಂಭ ಮಾಡದಿದ್ದರೆ ಸಾಣೂರು ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಊರಿನ ಎಲ್ಲಾ ಸಂಘ-ಸಂಸ್ಥೆಗಳು, ಹೆದ್ದಾರಿ ಹೋರಾಟ ಸಮಿತಿ ರಸ್ತೆಗಿಳಿದು ಭಾರೀ ಪ್ರತಿಭಟನೆ ಮಾಡಬೇಕಾಗಿತೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಎಚ್ಚರಿಸಿದ್ದಾರೆ.