ಉಡುಪಿ, ಮೇ 21: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಕಡೆ ವರುಣನ ಆರ್ಭಟ ಹೆಚ್ಚಾಗಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮಳೆ ಚುರುಕಾಗಲಿದೆ.