ಹಾಸನ : ಮೇ 25: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹಿನ್ನೆಲೆ ಶಿರಾಡಿ ಘಾಟ್ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದಿದೆ.
ತಡೆಗೋಡೆ ನಿರ್ಮಿಸಿದ್ದರು ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ. ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.