Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

Dhrishya News by Dhrishya News
27/05/2025
in ಸುದ್ದಿಗಳು
0
ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!
0
SHARES
11
VIEWS
Share on FacebookShare on Twitter

ಬೆಂಗಳೂರು:ಮೇ 27:2024-25ರ ಹಣಕಾಸು ವರ್ಷದ ಆದಾಯಕ್ಕೆ ಸಲ್ಲಿಸಲಾಗುವ ಐಟಿ ರಿಟರ್ನ್ಸ್​​ಗೆ ಗಡುವು ಹೆಚ್ಚಿಸಲಾಗಿದೆ. ಜುಲೈ 31ರವರೆಗೆ ಇದ್ದ ಕಾಲಾವಕಾಶ ಈಗ ಸೆಪ್ಟಂಬರ್ 15ರವರೆಗೂ ಇರುತ್ತದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದು, ಅಧಿಕೃತವಾಗಿ ಅಧಿಸೂಚನೆಯೊಂದನ್ನು ಪ್ರತ್ಯೇಕವಾಗಿ ಹೊರಡಿಸಲಿದೆ.

ಐಟಿಆರ್ ಫಾರ್ಮ್​​​ಗಳಲ್ಲಿ ಬಹಳಷ್ಟು ಪರಿಷ್ಕರಣೆ ಮಾಡಲಾಗಿದೆ. ಇದೂ ಸೇರಿದಂತೆ ಟಿಡಿಎಸ್ ಕ್ರೆಡಿಟ್ ಆಗಬೇಕಿರುವುದ ಇತ್ಯಾದಿ ಕಾರಣಕ್ಕೆ ಐಟಿಆರ್ ಸಲ್ಲಿಕೆಗೆ ಕಾಲಾವಕಾಶವನ್ನು ಹೆಚ್ಚಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಎಕ್ಸ್ ಪೋಸ್ಟ್​​​ನಲ್ಲಿ ತಿಳಿಸಲಾಗಿದೆ.

 

ತೆರಿಗೆ ಹೊಂದಾಣಿಕೆ ನಿಯಮ ಸರಳಗೊಳಿಸಿರುವುದು, ಪಾರದರ್ಶಕತೆ ಹೆಚ್ಚಿಸಿರುವುದು, ನಿಖರ ಮಾಹಿತಿ ಸಿಗುವಂತೆ ಮಾಡಿರುವುದು ಇತ್ಯಾದಿ ಹಲವು ರೀತಿಯ ರಚನಾತ್ಮಕ ಪರಿಷ್ಕರಣೆ ಮತ್ತು ಬದಲಾವಣೆಗಳನ್ನು ತರಲಾಗಿದೆ. ಇದಕ್ಕೆ ಪೂರಕವಾಗಿ ಸಿಸ್ಟಂ ಅಭಿವೃದ್ಧಿಗೆ ಹೆಚ್ಚುವರಿ ಕಾಲಾವಕಾಶ ಬೇಕಾಗಿದೆ. ಹಾಗೆಯೇ, ಟಿಡಿಎಸ್ ಸ್ಟೇಟ್ಮೆಂಟ್​​ಗಳು ಜೂನ್​ನಲ್ಲಿ ಪ್ರತಿಫಲಿತವಾಗಲು ಆರಂಭಿಸುತ್ತವೆ. ಹೀಗಾಗಿ, ಐಟಿಆರ್ ಸಲ್ಲಿಕೆಯನ್ನು ವಿಸ್ತರಿಸುವುದು ಸೂಕ್ತ ಎನಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಅಧಿಕೃತವಾಗಿ ಅಧಿಸೂಚನೆಯೂ ಪ್ರಕಟವಾಗಲಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯು ತಾತ್ವಿಕವಾಗಿ ಏಪ್ರಿಲ್ 1ರಂದು ಆರಂಭವಾಗುತ್ತದೆ. ಜುಲೈ 31ರವರೆಗೆ ಗಡುವು ಇರುತ್ತದೆ. ಆದರೆ, ಈ ಬಾರಿ ಜೂನ್ 15ರ ನಂತರ ಐಟಿಆರ್ ಸಲ್ಲಿಕೆಗೆ ಯತ್ನಿಸುವುದು ಉತ್ತಮ ಎಂದು ಪರಿಣಿತರು ಹೇಳುತ್ತಿದ್ದಾರೆ.

ಐಟಿಆರ್ ಫಾರ್ಮ್​​ಗಳು ಲಭ್ಯ ಇವೆಯಾದರೂ, ಅವುಗಳನ್ನು ಸಲ್ಲಿಸಲು ಬೇಕಾದ ಆನ್​​ಲೈನ್ ಸಾಫ್ಟ್​ವೇರ್ ಇತ್ಯಾದಿ ಯುಟಿಲಿಟಿಗಳನ್ನು ಆದಾಯ ತೆರಿಗೆ ಬಿಡುಗಡೆ ಮಾಡಿಲ್ಲ. ಹೀಗಾಗಿ, ರಿಟರ್ನ್ಸ್ ಫೈಲ್ ಮಾಡುವುದನ್ನು ಮುಂದೂಡುವುದು ಸೂಕ್ತ ಎನ್ನುವ ಅಭಿಪ್ರಾಯ ಇದೆ.

ಮತ್ತೊಂದು ಕಾರಣ ಎಂದರೆ, ಹೊಸ ಟಿಡಿಎಸ್ ಸರ್ಟಿಫಿಕೇಟ್ ಅನ್ನು ಜೂನ್ 15ಕ್ಕೆ ಪಡೆದ ಬಳಿಕ ಐಟಿಆರ್ ಸಲ್ಲಿಸುವುದು ಉತ್ತಮ. 2024-25ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕೆ ಟಿಡಿಎಸ್ ಅನ್ವಯ ಆಗುತ್ತದೆ. ಆ ರೀತಿ ಟಿಡಿಎಸ್ ಕಟ್ಟಿದ್ದರೆ ಅದರ ಇಟಿಡಿಎಸ್ ರಿಟರ್ನ್ ಫೈಲ್ ಮಾಡಬೇಕು. ಅದಕ್ಕೆ ಮೇ 31ರವರೆಗೆ ಕಾಲಾವಕಾಶ ಇರುತ್ತದೆ. ಇಟಿಡಿಎಸ್ ರಿಟರ್ನ್ ಸಲ್ಲಿಸಿದ 3-4 ದಿನಗಳ ನಂತರ ಅದು ಫಾರ್ಮ್ 26ಎಎಸ್​​​ನಲ್ಲಿ ಕಾಣುತ್ತದೆ.

ಆದಾಯದಾತರು ಫಾರ್ಮ್ 16 ಅಥವಾ ಫಾರ್ಮ್ 16ಎ ನಲ್ಲಿ ಆ ಆದಾಯಕ್ಕೆ ಟಿಡಿಎಸ್ ಸರ್ಟಿಫಿಕೇಟ್ ಅನ್ನು ಜೂನ್ 15ರೊಳಗೆ ನೀಡಬೇಕು. ಈ ಟಿಡಿಎಸ್ ಸರ್ಟಿಫಿಕೇಟ್​​ಗಳು ಇದ್ದಾಗ ಐಟಿ ರಿಟರ್ನ್ಸ್ ಫೈಲ್ ಮಾಡುವುದು ಬಹಳ ಸುಲಭದ ಕೆಲಸವಾಗುತ್ತದೆ. ಈ ಕಾರಣಕ್ಕೆ, ತೆರಿಗೆ ಪಾವತಿದಾರರು ಐಟಿಆರ್ ಫೈಲಿಂಗ್ ಮಾಡುವ ಕೆಲಸವನ್ನು ಜೂನ್ 15ರ ನಂತರ ಇಟ್ಟುಕೊಳ್ಳಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

Previous Post

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

Next Post

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved