ಉಡುಪಿ :ಮೇ 27:ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ನೂರು ಶೇಕಡಾ ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಪುರಸ್ಕಾರ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಸಮಾರಂಭ ಆಯೋಜಿಸಲಾಗಿತ್ತು
ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವಲ್ಲಿ ಶ್ರಮಿಸಿದ ಜಿಲ್ಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರುಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.