ಬಂಟ್ವಾಳ: ಮೇ 28: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 27ರಂದು ರಹೀಂ ಎಂಬ ಯುವಕನ ಕೊಲೆ ಜರುಗಿದ್ದು, ಆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸಹಿತ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮೇ 27ರ ಸಂಜೆ ಆರು ಗಂಟೆಯಿಂದ ಮೇ 30ರ ಸಂಜೆ ಆರು ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶಿಸಿದ್ದರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದನ್ನು ನಿಷೇಸಿದೆ. ಯಾವುದೇ ಶಸ್ತ್ರಗಳು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.