ಬೆಂಗಳೂರು: ಜೂನ್ 01 : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಯಾಗಿದೆ ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.