ಕಾರ್ಕಳ: ಜೂನ್ 09:ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ (37) ಎಂಬವರು ಇಂದು ಜೂನ್ 09 ರಂದು ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಶರತ್ ಶೆಟ್ಟಿ ಆಗಾಗ ಊರಿಗೆ ಬಂದು ಹೋಗುತ್ತಿದ್ದರು. ಮೃತರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದು ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.