ಉಡುಪಿ : ಜೂನ್ 15:ಉಡುಪಿಯ ಪಾಟೀದಾರ ಸನಾತನ ಸಮಾಜದ ವತಿಯಿಂದ ಚಿಟ್ಪಾಡಿ ಶ್ರೀ ಶಾರದಾಂಬ ದೇವಸ್ಥಾನದ ಸಭಾಭವನದಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಮಾತನಾಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಆಯೋಜಿಸಿದ ಕಾರ್ಯಕ್ರಮದ ಬಗ್ಗೆ ಅಭಿನಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಅಮೃತ್ ಭಾಯಿ ಪಟೇಲ್, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀ ಕೃಷ್ಣ ಕೊಡಂಚ, ಶ್ರೀ ಮಂಜುನಾಥ ಮಣಿಪಾಲ, ಸಂಘದ ಪದಾಧಿಕಾರಿಗಳು ಮೊದಲಾದ ಗಣ್ಯರು ಉಪಸ್ಥಿತರಿದ್ದರು.