Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

Dhrishya News by Dhrishya News
25/06/2025
in ಸುದ್ದಿಗಳು
0
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!
0
SHARES
30
VIEWS
Share on FacebookShare on Twitter

ಜೂನ್ 25:  ಭಾರತೀಯ ಶುಭಾಂಶು ಶುಕ್ಲಾ ಅವರ ಅಂತರಿಕ್ಷಯಾನ ಇಂದು ಮಧ್ಯಾಹ್ನ ಕೈಗೂಡುವ ಸಾಧ್ಯತೆಯಿದೆ

ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 12:01ಕ್ಕೆ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಂ ನೌಕೆ ನಭಕ್ಕೆ ಚಿಮ್ಮಲಿದೆ. ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್‌ ಮೂಲಕ ಶುಭಾಂಶು ಶುಕ್ಲಾ ಅವರ ಜೊತೆಗೆ ಇತರೆ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

28 ಗಂಟೆ ಪ್ರಯಾಣದ ಬಳಿಕ ಉದ್ದೇಶಿತ ಡಾಕಿಂಗ್ ಅನ್ನು ಗುರುವಾರ ಸಂಜೆ 4:30ಕ್ಕೆ ಕೈಗೊಳ್ಳಲಾಗುವುದು ಎಂದು ನಾಸಾ ಮಾಹಿತಿ ನೀಡಿದೆ.

ಲಕ್ನೋದವರಾದ ಶುಕ್ಲಾ, ಆಕ್ಸಿಯಮ್‌ ಸ್ಪೇಸ್‌ನ ಇಸ್ರೋ-ನಾಸಾ ಬೆಂಬಲಿತ ವಾಣಿಜ್ಯ ಬಾಹ್ಯಾಕಾಶ ಹಾರಾಟದ ಭಾಗವಾಗಿದ್ದಾರೆ. ಫ್ಲೋರಿಡಾದ ಕೆಎಸ್‌ಸಿಯ ಲಾಂಚ್ ಕಾಂಪ್ಲೆಕ್ಸ್ 39A ನಿಂದ ಲಿಫ್ಟ್-ಆಫ್ ಮಾಡಲು ಹೊಂದಿಸಲಾದ ಆಕ್ಸಿಯಮ್-4 (ಆಕ್ಸ್-4) ಕಾರ್ಯಾಚರಣೆಯಲ್ಲಿ ಕಮಾಂಡರ್ ಪೆಗ್ಗಿ ವಿಟ್ಸನ್, ಪೈಲಟ್ ಶುಕ್ಲಾ, ತಜ್ಞರಾದ ಹಂಗೇರಿಯ ಟಿಗೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ಇದ್ದಾರೆ.

ಉಡಾವಣೆಗೆ ಮುನ್ನ ಆಕ್ಸ್-4 ಸಿಬ್ಬಂದಿ ಮತ್ತು ಸ್ಪೇಸ್‌ಎಕ್ಸ್ ತಂಡಗಳು ಉಡಾವಣಾ ದಿನದ ಚಟುವಟಿಕೆಗಳ ಸಂಪೂರ್ಣ ಪೂರ್ವಾಭ್ಯಾಸವನ್ನು ಪೂರ್ಣಗೊಳಿಸಿವೆ. 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಪ್ರಯೋಗಗಳನ್ನು ನಡೆಸಲಿದ್ದಾರೆ.

ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಸೇರಿದಂತೆ 60 ರೀತಿಯ ವಿವಿಧ ಪ್ರಯೋಗ ನಡೆಸಲಿದ್ದಾರೆ. ಇದರಲ್ಲಿ ಭಾರತದ ಪರವಾಗಿ ಶುಕ್ಲಾ ನಡೆಸುವ 7 ಪ್ರಯೋಗ ಕೂಡಾ ಸೇರಿದೆ. ತಮ್ಮ ಪ್ರಯಾಣದ ವೇಳೆ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸವನ್ನು ಐಎಸ್‌ಎಸ್‌ನ ಸಹಯೋಗಿ ಗಳಿಗಾಗಿ ಕೊಂಡೊಯ್ಯಲಿದ್ದಾರೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 14 ದಿನಗಳ ಕಾರ್ಯಾಚರಣೆ ನಡೆಸುವ ‘ಆಕ್ಸ್ -4’ ಗಗನಯಾತ್ರಿಗಳು, ಪ್ರಧಾನಿ ನರೇಂದ್ರ ಮೋದಿ, ಶಾಲಾ ವಿದ್ಯಾರ್ಥಿಗಳು ಮತ್ತು ಬಾಹ್ಯಾಕಾಶ ಉದ್ಯಮದ ಪ್ರಮುಖರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ.

ಆಕ್ಸಿಯಮ್ ಮಿಷನ್ 4 ನಲ್ಲಿನ ಶುಕ್ಲಾ ಅವರ ಅನುಭವವನ್ನು 2027 ಕ್ಕೆ ಯೋಜಿಸಲಾಗಿರುವ ಗಗನಯಾನ ಕಾರ್ಯಾಚರಣೆಯಲ್ಲಿ ಉತ್ತಮವಾಗಿ ಬಳಸಿಕೊಳ್ಳಲಾಗುವುದು. ಆಕ್ಸಿಯಮ್ -4 ಕಾರ್ಯಾಚರಣೆಗಾಗಿ ಇಸ್ರೋ 550 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.

ಈ ಹಿಂದೆ 1984ರಲ್ಲಿ ರಾಕೇಶ್ ಶರ್ಮಾ, ರಷ್ಯಾದ ಸೂಯೆಜ್ ನೌಕೆ ಯಲ್ಲಿ ಅಂತರಿಕ್ಷ ಪ್ರವಾಸ ಕೈಗೊಂಡು ಇತಿಹಾಸ ನಿರ್ಮಿಸಿದ್ದರು. ಇದಾದ ನಂತರ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ಕಲ್ಪನಾ ಚಾವ್ಲಾ ಬಾಹ್ಯಾಕಾಶಕ್ಕೆ ಹೋಗಿದ್ದರು. ಇವರು ಭಾರತೀಯ ಮೂಲದ ಅಮೆರಿಕ ಪ್ರಜೆಗಳೇ ಹೊರತು ಭಾರತೀಯ ಪ್ರಜೆ ಅಲ್ಲ. ಹೀಗಾಗಿ ಶರ್ಮಾ ನಂತರ ನಭಕ್ಕೆ ಜಿಗಿಯಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರವಾಗಲಿದ್ದಾರೆ.

Previous Post

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

Next Post

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025

Recent News

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

13/07/2025
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

13/07/2025
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

13/07/2025
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

13/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved