Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ:ಜುಲೈ 7ರಿಂದ 9ರ ವರೆಗೆ ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ..!! 

Dhrishya News by Dhrishya News
06/07/2025
in ಸುದ್ದಿಗಳು
0
ಮಣಿಪಾಲ:ಜುಲೈ 7ರಿಂದ 9ರ ವರೆಗೆ ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ..!! 
0
SHARES
16
VIEWS
Share on FacebookShare on Twitter

ಮಣಿಪಾಲ, ಜು.05: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯ ಭಾಗವಾದ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ (ಎಂ ಸಿ ಒ ಎನ್), ಕೆನಡಾದ ಯೂನಿವರ್ಸಿಟಿ ಆಫ್ ನ್ಯೂ ಬ್ರನ್ಸ್ವಿಕ್ (ಯು ಎನ್ ಬಿ) ಸಹಯೋಗದಲ್ಲಿ “ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ (ಇಡಿಐ) ಕುರಿತಾಗಿ ಅಂತರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ ಶಿಕ್ಷಣ ಸಂಶೋಧನೆ ಮತ್ತು ಆಚರಣೆಗಾಗಿ ಜಾಗತಿಕ ಸಹಯೋಗದ ಭವಿಷ್ಯವನ್ನು ಕಲ್ಪಿಸುವುದು ಎಂಬ ಸಂಕಲ್ಪದೊಂದಿಗೆ ಜುಲೈ 7ರಿಂದ 9ರ ವರೆಗೆ ಮಣಿಪಾಲ ಕೆಎಂಸಿಯ ಡಾ. ಟಿ ಎಂ ಎ ಫೈ ಅಡಿಟೋರಿಯಂ ನಲ್ಲಿ ನಡೆಯಲಿದೆ.

ಅಂತರ್ಗತ ಆರೋಗ್ಯ ಸೇವೆಗಳ ಅಭ್ಯಾಸಗಳನ್ನು ಉತ್ತೇಜಿಸಲು ಜಾಗತಿಕ ನಾಯಕರು, ಶೈಕ್ಷಣಿಕ ತಜ್ಞರು, ಸಂಶೋಧಕರು, ನೀತಿ ನಿರ್ಣಯಿಸುವವರು ಮತ್ತು ಆರೋಗ್ಯ ವೃತ್ತಿಪರರನ್ನು ಒಟ್ಟುಗೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ಕಾರ್ಯಕ್ರಮ ಏಳು ಪೂರ್ಣ ಆದಿವೇಶನ, ವೈಜ್ಞಾನಿಕ ಲೇಖನ/ ಪೋಸ್ಟರ್ ಪ್ರದರ್ಶನಗಳು ಮತ್ತು ಮಿಶ್ರ ವಿಧಾನಗಳ ಸಂಶೋಧನೆ ಕುರಿತು ಪೂರ್ವ ಸಮ್ಮೇಳನ ಕಾರ್ಯಗಾರ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿರುತ್ತದೆ.
ಪ್ರಮುಖ ಮಾತುಗಾರರಾಗಿ ಡಾ. ಅನೀಸ್ ಜಾರ್ಜ್, ಡಾ. ಮೇರಿ ಲಿನಾ ಎಕ್ಸಲೆಂಟ್ (ಅಮೆರಿಕ), ಡಾ. ಮಾರ್ತಾ ಪೈನ್ಟರ್ (ಕೆನಡಾ), ಡಾ. ವೀಣಾ ವಾಸ್ವಾನಿ, ಡಾ. ಚೇರಿಯನ್ ವರ್ಗೀಸ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .
ಸಾಂಸ್ಕೃತಿಕ ವಿನಮ್ರತೆ, ಆರೋಗ್ಯ ಸಮಾನತೆಯಿಂದ ಹಿಡಿದು ಮಾರ್ಜಿನಲೈಸ್ಡ್ ಸಮುದಾಯಗಳ ಶಕ್ತೀಕರಣ, ಮತ್ತು ಅಂತಾರಾಷ್ಟ್ರೀಯ ಆರೋಗ್ಯ ನವೋದ್ಯಮಗಳವರೆಗೆ ಅಧಿವೇಶನದ ವಿಷಯ ವ್ಯಾಪಕತೆ ಇರುತ್ತದೆ.
ಜುಲೈ 8ರಂದು ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಮಾಹೆ ಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ ಅವರು ಹಾಗೂ ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗಣ್ಯರು ಉಪಸ್ಥಿತರಿರಲಿದ್ದಾರೆ.
ಈ ಸಮ್ಮೇಳನವು ದಿ. ಡಾ. ಅಪರ್ಣಾ ಭದೂರಿ ಮತ್ತು ದಿ. ಪ್ರೊಫೆಸರ್ ಪಿ.ಪಿ. ಭಾನುಮತಿ ಅವರ ಸ್ಮರಣಾರ್ಥವಾಗಿ ವಿಶೇಷ ಉಪನ್ಯಾಸಗಳನ್ನು ಆಯೋಜಿಸಿದ್ದು, ಈ ಕೆಳಗಿನ ಉದ್ದೇಶಗಳನ್ನು ಹೊಂದಿದೆ:
ಆರೋಗ್ಯ ಶಿಕ್ಷಣ ಮತ್ತು ಸೇವೆಯಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ಉತ್ತೇಜಿಸುವುದು.
ಅಂತಾರಾಷ್ಟ್ರೀಯ ಶೈಕ್ಷಣಿಕ ಸಹಕಾರಕ್ಕೆ ವೇದಿಕೆ ಒದಗಿಸುವುದು.
ನವೀನ ನೀತಿ ರೂಪಣೆಗಳ ಮೂಲಕ ಆರೋಗ್ಯ ಅಂತರಗಳನ್ನು ದೂರ ಮಾಡುವುದು.
ಪ್ರಾರಂಭಿಕ ಹಂತದ ವೃತ್ತಿಪರರು ಮತ್ತು ಸಂಶೋಧಕರನ್ನು ತೊಡಗಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ ಭೇಟಿ ನೀಡಿ: https://conference.manipal.edu/MICEDI2025/
ಅತ್ಯುತ್ತಮ ಹಾಗೂ ಅರ್ಥಪೂರ್ಣ ಸಂವಾದ ಮತ್ತು ಕ್ರಿಯೆಯ ಮೂಲಕ ಈ ಮಹತ್ವದ ಸಮ್ಮೇಳನವು ಜಾಗತಿಕ ಆರೋಗ್ಯ ವ್ಯವಸ್ಥೆಗಳಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ಅಭಿವೃದ್ಧಿಪಡಿಸಲು ಒಂದು ಹೊಸ ದಾರಿಯ ಉಗಮಕ್ಕೆ ಕಾರಣವಾಗಲಿದೆ.

Previous Post

ಉಡುಪಿ :ಶ್ರೀ ಕೃಷ್ಣನ ಮೂರ್ತಿಯ ಅರ್ಪಣೆ..!!

Next Post

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸಂಪನ್ನ..!!

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved