ಉಡುಪಿ : ಜುಲೈ 06:ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭವನ್ನು ಜುಲೈ 6ರಂದು ಆಯೋಜಿಸಲಾಗಿತ್ತು
ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್ ಪ್ರಾಸ್ತವಿಕ ಮಾತನಾಡಿ ಆಗಮಿಸಿದ ಗಣ್ಯರೆಲ್ಲರನ್ನು ಸ್ವಾಗತಿಸಿದರು
ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ವೈದ್ಯರ ದಿನದ ಶುಭ ಹಾರೈಸಿ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದ ಉತ್ತಮ ಸಾಧನೆಗೆ ಸೇವೆ ಸಲ್ಲಿಸುತ್ತಿರುವ ವೈದ್ಯ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ನಿಸ್ವಾರ್ಥ ,ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಅನವರತ ಸಲ್ಲಿಸಿರುವ ವೈದ್ಯರುಗಳಾದ ಹಿರಿಯ ವೈದ್ಯಕೀಯ ತಜ್ಞರಾದ ಡಾ| ಎನ್. ಆರ್ ರಾವ್, ಡಾ |ನಾಗರತ್ನ ಬಿ ಶಾಸ್ತ್ರೀ , ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿ, ಕುಟುಂಬ ಕಲ್ಯಾಣಾಧಿಕಾರಿ ಡಾ | ಶ್ರೀ ರಾಮರಾವ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ | ವಾಸುದೇವ್ ಉಪಾಧ್ಯಾಯ, ತಾಲೂಕು ಮಲೇರಿಯ ನಿರ್ಮೂಲನ ಅಧಿಕಾರಿ ಡಾ |ಪ್ರಶಾಂತ್ ಭಟ್,ಬೈಲೂರಿನ ಡಾ|ಶಶಿಕಿರಣ್ ಆಚಾರ್ ಹಾಗೂ ಪಡುಬಿದ್ರಿಯ ಡಾ |ಭವಾನಿ ಶಂಕರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು
ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ,ಅಪರ ಜಿಲ್ಲಾಧಿಕಾರಿ ಶ್ರೀ ಅಭಿದ್ ಗದ್ಯಾಳ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಾದ ಶ್ರೀ ಬಸವರಾಜ್ ಹುಬ್ಬಳ್ಳಿ ಜಾಗೂ ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಅವರು ಉಪಸ್ಥಿತರಿದ್ದರು
ಈ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಸಾರ್ವಜನಿಕರಿಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದ ಸಂಪೂರ್ಣ ಪರೀಕ್ಷೆ (CBC ), ರಕ್ತದ ಸಕ್ಕರೆ ಅಂಶ ಹಾಗೂ ಕೊಬ್ಬಿನ ಅಂಶ ,ಲಿವರ್ ಸ್ಕ್ಯಾನಿಂಗ್ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು. ಅಷ್ಟೇ ಅಲ್ಲದೇ ವೈದ್ಯರ ಸಲಹೆಯ ಮೇರೆಗೆ ಅಗತ್ಯವೆಂದು ಕಂಡುಬರುವ ರೋಗಿಗಳಿಗೆ ಹೃದಯದ ಸ್ಕ್ಯಾನಿಂಗ್ (ಇಕೋ ) ಹಾಗೂ ಟಿ.ಎಂ.ಟಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು