Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಕೊಡಂಕೂರಿನಲ್ಲಿ  ಮನೆಗಳಿಗೆ ನುಗ್ಗಿ ಅಪಾರ ಮೌಲ್ಯದ ಸೊತ್ತಗಳ ಕಳ್ಳತನ: ಪ್ರಕರಣ ಧಾಖಲು..!!

Dhrishya News by Dhrishya News
08/07/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ, ಜುಲೈ 08: ಕೊಡಂಕೂರಿನಲ್ಲಿ ಎರಡು ಮನೆಗಳಿಗೆ ನುಗ್ಗಿ ಅಪಾರ ಮೌಲ್ಯದ ಸೊತ್ತಗಳನ್ನು ಕಳವು ಮಾಡಿರುವ ಬಗ್ಗೆ  ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ .

ಕೊಡಂಕೂರಿನ ಶಕುಂತಲಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಲಾಗಿದೆ. ಇವರು ಹೆಚ್ಚಾಗಿ ಅಮ್ಮುಂಜೆಯ ಅವರ ಅಕ್ಕನ ಮಗಳ ಮನೆಯಲ್ಲಿ ಇರುತ್ತಿದ್ದು, 15 ದಿನಗಳಿಗೊಮ್ಮೆ ಇಲ್ಲಿಗೆ ಬಂದು ಮನೆ ಸ್ವಚ್ಛ ಮಾಡಿ ಹೋಗುತ್ತಿದ್ದರು. ಜೂ.20 ರಂದು ಎಂದಿನಂತೆ ಬೆಳಗ್ಗೆ ಬಂದು ಹೋಗಿದ್ದರು. ಜು.7 ರಂದು ಬೆಳಗ್ಗೆ ನೆರೆ ಮನೆಯ ವಾಸುದೇವ ರಾವ್ ಅವರು ಶಕುಂತಲಾ ಅವರಿಗೆ ಕರೆ ಮಾಡಿ ಮನೆಯ ದ್ವಾರದ ಬೀಗ ಮುರಿದಿರುವುದಾಗಿ ತಿಳಿಸಿದ್ದರು. ಕೂಡಲೇ ಶಕುಂತಲಾ ಬಂದು ಗಮನಿಸಿದಾಗ ಮನೆಯ ಎದುರಿನ ಬಾಗಿಲು ತೆರೆದಿತ್ತು. ಒಳಗೆ ಹೋಗಿ ಕಂಡಾಗ ಕಳ್ಳರು ಆಯುಧದಿಂದ ಬಾಗಿಲನ್ನು ಮುರಿದು ಒಳನುಗ್ಗಿ ಗೋದ್ರೇಜ್ ಕಪಾಟಿನಲ್ಲಿದ್ದ ಚಿನ್ನದ ಕಿವಿ ಬೆಂಡೋಲೆ, ಲಕ್ಷ್ಮೀ ಪೆಂಡೆಂಟ್, ಚಿನ್ನದ ಉಂಗುರ, ಕೆಂಪು ಹವಳದ ಚಿನ್ನದ ಸರ, ಚಿನ್ನದ ಕಪ್ಪು ಮಣಿಸರ, ಬೆಳ್ಳಿಯ ಸೊಂಟದ ಪಟ್ಟಿ, ಬೆಳ್ಳಿಯ ಕಾಲು ಗೆಜ್ಜೆ, ಸಹಿತ ಒಟ್ಟು 1.70 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಸೊತ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಕಲಾವತಿ ರವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 127/2025, ಕಲಂ: 331(3), 331(4), 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

ಮೂರು ವರ್ಷದಿಂದ ಶಿಕಾರಿಪುರದಲ್ಲಿ ಟೈಲ್ಸ್ ಉದ್ಯಮ ನಡೆಸುತ್ತಿರುವ ಕೊಡಂಕೂರಿನ ಅಶ್ವತ್ ಅವರ ಮನೆಗೂ ಕಳ್ಳರು ನುಗ್ಗಿದ್ದಾರೆ. ಇವರ ಮನೆಯಲ್ಲಿ ತಾಯಿ ಮಾತ್ರ ವಾಸವಿದ್ದು, ವಾರಕ್ಕೊಮ್ಮೆ ಅವರ ತಂಗಿ ಮಗಳು ಚೈತ್ರಾ ಬರುತ್ತಿದ್ದರು. ಅಶ್ವತ್‌ ಅವರು ತಾಯಿಯನ್ನು 15 ದಿನಗಳ ಹಿಂದೆ ಶಿಕಾರಿಪುರಕ್ಕೆ ಕರೆದೊಯ್ದಿದ್ದರು. ಜು.5ರಂದು ಚೈತ್ರಾ ಕೊಡಂಕೂರಿನ ಮನೆಗೆ ರಾತ್ರಿ ಬಂದು ಬಳಿಕ ಕೊಡಂಕೂರಿನ ಗೆಳತಿಯ ಮನೆಗೆ ಹೋಗಿದ್ದರು. ಜು.6 ರಂದು ಬೆಳಗ್ಗೆ ನೋಡಿದಾಗ ಮನೆಯ ಎದುರು ಭಾಗ ಮುರಿದಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಕಳ್ಳರು ಮನೆಯ ಮುಂದಿನ ಬಾಗಿಲು ಒಡೆದು 5 ಗ್ರಾಂ ತೂಕದ ಚಿನ್ನದ ಕಿವಿ ಓಲೆ, 2 ಗ್ರಾಂ ತೂಕದ ಚಿನ್ನದ ಪೆಂಡೆಂಟ್ ಹಾಗೂ 20 ಸಾವಿರ ರೂ.ನಗದನ್ನು  ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 128/2025, ಕಲಂ: 331(3) , 331(4), 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Previous Post

ಸುರತ್ಕಲ್‌:ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಬಿದ್ದು ಸಾವು..!!

Next Post

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026