Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

Dhrishya News by Dhrishya News
08/07/2025
in ಸುದ್ದಿಗಳು
0
ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!
0
SHARES
10
VIEWS
Share on FacebookShare on Twitter

ಕುಂದಾಪುರ: ಜುಲೈ 08:ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೊಡಚಾದ್ರಿ ಬೆಟ್ಟದಿಂದ ಸುಮಾರು 500 ಅಡಿಗೂ ಎತ್ತರದಿಂದ ಹಾಲ್ಗೊರೆಯಂತೆ ಧುಮ್ಮಿಕ್ಕುವ ‘ಬೆಳ್ಳಲ್ ತೀರ್ಥ’ (ಗೋವಿಂದ ತೀರ್ಥ) ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ.

ಈ ರಮಣೀಯ ದೃಶ್ಯವನ್ನು ಕಣ್ಣುಂಬಿಕೊಳ್ಳಲು ಕಳೆದ ಕೆಲ ದಿನಗಳಿಂದ ದುರ್ಗಮ ಹಾದಿಯ ನಡುವೆಯೂ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಎತ್ತರದಿಂದ ಕಲ್ಲುಬಂಡೆಗಳ ನಡುವೆ ಕವಲು – ಕವಲಾಗಿ ಭೋರ್ಗರೆಯುತ್ತಿರುವ ಈ ಜಲಧಾರೆಯ ಸೊಬಗನ್ನು ಕಾಣುವುದೇ ಚೆಂದ.

ಕುಂದಾಪುರದಿಂದ ಸುಮಾರು 50 ಕಿ.ಮೀ., ಕೊಲ್ಲೂರಿನಿಂದ 15 ಕಿ.ಮೀ. ದೂರದಲ್ಲಿದೆ ಬೆಳ್ಳಲ್ ತೀರ್ಥ. ಹೆಮ್ಮಾಡಿ – ಕೊಲ್ಲೂರು ಮುಖ್ಯ ರಸ್ತೆಯ ಜಡಲ್ ತೆರಳಿ, ಅಲ್ಲಿಂದ ಮುದೂರಿಗೆ ತೆರಳುವ ರಸ್ತೆಯಲ್ಲಿ 8 ಕಿ.ಮೀ. ಸಾಗಬೇಕು. ಅಲ್ಲಿ ಮೈದಾನ ಎಂಬ ಊರಿದ್ದು ಅಲ್ಲಿಂದ ಸ್ವಲ್ಪ ದೂರದವರೆಗೆ ಮಾತ್ರ ವಾಹನ ಸಂಚಾರವಿದ್ದು ಮತ್ತೆ 4 ಕಿ.ಮೀ. ಕಾಡಿನಲ್ಲಿ ಕಾಲ್ನಡಿಗೆಯ ಮೂಲಕವೇ ತೆರಳಬೇಕು. ಸಿದ್ದಾಪುರ, ಹಳ್ಳಿಹೊಳೆ ಮಾರ್ಗವಾಗಿಯೂ ಬರಬಹುದು.500 ಅಡಿ ಎತ್ತರದಿಂದ ಧುಮ್ಮಿಕ್ಕುವ ಬೆಳ್ಳಲ್ ತೀರ್ಥ ಜಲಪಾತ.

ಈ ತೀರ್ಥಕ್ಕೆ ಪುರಾತನ ಹಿನ್ನೆಲೆ

3-4ಕಿ.ಮೀ ದೂರದಲ್ಲಿ ವಿಶ್ವಂಭರ ಮಹಾಗಣಪತಿ, ಕೋಟಲಿಂಗೇಶ್ವರ, ಗೋವಿಂದ ದೇವರ ಸನ್ನಿಧಾನವಿದೆ. ಹಿಂದೆ ಈ ದೇಗುಲ ಜಲಪಾತದ ಸನಿಹದಲ್ಲಿಯೇ ಇದ್ದು ಅಲ್ಲಿಗೆ ಹೋಗುವ ದಾರಿ ದುರ್ಗಮ ಆಗಿದ್ದರಿಂದ ಇಲ್ಲಿ ಪ್ರತಿಷ್ಠಾಪಿಸಲಾಯಿತು. ಮೂಕಾಂಬಿಕೆಯು ಆಯುಧವನ್ನು ಈ ಬೆಳ್ಳಲ್ ತೀರ್ಥದಲ್ಲಿ ತೊಳೆದಳು ಅನ್ನುವ ಪ್ರತೀತಿಯೂ ಇದೆ. ಹಾಗಾಗಿ ಎಳ್ಳಮಾವಾಸ್ಯೆ ದಿನ ಇಲ್ಲಿ ತೀರ್ಥ ಸ್ನಾನ ಮಾಡಲು ಸಹಸ್ರಾರು ಮಂದಿ ಬರುತ್ತಾರೆ.

ಮುನ್ನೆಚ್ಚರಿಕೆ ಅಗತ್ಯ : ಶುಚಿತ್ವ ಕಾಪಾಡಿ ದುರ್ಗಮ ಹಾದಿಯಲ್ಲಿ ನಡೆದುಕೊಂಡುbಹೋಗುವಾಗ ಮುನ್ನೆಚ್ಚರಿಕೆ ಅಗತ್ಯ. ಜಲಪಾತದಲ್ಲಿಯೂ ನೀರಿನಲ್ಲಿ ಇಳಿಯುವಾಗ ಮುಂಜಾಗ್ರತೆ ಅಗತ್ಯ. ಕಲ್ಲುಬಂಡೆಗಳು ಪಾಚಿಗಟ್ಟಿ ಜಾರುತ್ತಿದ್ದು, ಮೋಜು ಮಸ್ತಿಯಲ್ಲಿ ಮೈಮರೆಯಬಾರದು.

ಇಲ್ಲಿಗೆ ಬರುವ ಪ್ರವಾಸಿಗರು ಪ್ಲಾಸ್ಟಿಕ್, ನೀರಿನ ಬಾಟಲಿ, ಹಿಂಡಿಯ ವೊಟ್ಟಣಗಳು, ಒದ್ದೆಯಾದ ಬಟ್ಟೆ-ಬರೆಗಳನ್ನು ಇಲ್ಲಿ ಎಸೆದು ಶುಚಿತಕ್ಕೆ ಧಕ್ಕೆ ಉಂಟು ಮಾಡುತ್ತಿರುವುದು ಕಂಡು ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಿದೆ.

Previous Post

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

Next Post

ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ - ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved