Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

Dhrishya News by Dhrishya News
14/07/2025
in ಸುದ್ದಿಗಳು
0
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!
0
SHARES
28
VIEWS
Share on FacebookShare on Twitter

ಕಾರ್ಕಳ: ಜುಲೈ 14:ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು. 

ಇಂದು ಕಾರ್ಕಳದ ಬಂಡಿಮಠ ಬಸ್ಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಸಿಗೆ ಬಾಳೆಗಿಡ, ಹೂವಿನ ಹಾರ, ಬಣ್ಣದ ಬಲೂನ್ ಕಟ್ಟಿ ಸಿಂಗರಿಸಲಾಯಿತು. ಶಕ್ತಿ ಯೋಜನೆಯ ಫಲಾನುಭವಿಗಳಾದ ಮಹಿಳೆಯರು ಶೋಭಾನ ಹಾಡಿನ‌ ಮೂಲಕ ಆರತಿ ಎತ್ತಿ ಪೂಜಿಸಿ, ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕ ನಿರ್ವಾಹಕರಾದ ಕೇಶವ.ಜಿ.ಹೆಚ್, ಶಿವಪುತ್ರ ಕುಂಬಾರ ಇವರಿಗೆ ಶಾಲು, ಫಲಪುಷ್ಟ ಕಾಣಿಕೆ ನೀಡಿ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷರು, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಭೂಮಸೂದೆ ಕಾನೂನು, ಕೃಷಿ ನೀರಾವರಿಗೆ ಉಚಿತ ವಿದ್ಯುತ್ ಯೋಜನೆ, ಸಾಲಮೇಳ, ಸಿಇಟಿ ಪರೀಕ್ಷೆ ಮುಂತಾದ ಜನಪರ, ಬಡವರ ಪರವಾದ ಯೋಜನೆಗಳನ್ನು ಕೊಟ್ಟ ಕಾಂಗ್ರೆಸ್ ಈಗ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ ಎನ್ನುವುದನ್ನು ಸಾಭೀತು ಮಾಡಿದೆ ಎಂದರು. 

ಕಾರ್ಕಳ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ ಎರಡು ವರ್ಷಗಳಲ್ಲಿ ಶಕ್ತಿ ಯೋಜನೆಯ ಮೂಲಕ ರಾಜ್ಯಾದ್ಯಂತ ಮಹಿಳೆಯರು 500 ಕೋಟಿ ಪ್ರಯಾಣವನ್ನು ಮಾಡಿರುವುದು ಇದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಿಜೆಪಿಗೆ ರಾಜ್ಯದ ಮಹಿಳೆಯರು ನೀಡಿದ ಉತ್ತರವಾಗಿದೆ ಎಂದರು. 

ಹಿರಿಯ ವಕೀಲರಾದ ಶೇಖರ ಮಡಿವಾಳ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. 

 

ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್ ಮಾತನಾಡಿ ರಾಜ್ಯದ ಆರ್ಥಿಕತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಪರೋಕ್ಷವಾಗಿ ಸಹಕಾರಿಯಾಗಿದೆ ಎಂದರು. 

 

 ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಫಲವಾಗಿ ಇಂದು 500 ಕೋಟಿ ಪ್ರಯಾಣದ ದಾಖಲೆಯನ್ನು ನಿರ್ವಹಿಸಲು ಸಾಧ್ಯವಾಯಿತು ಎಂದು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. 

ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ ಸಂದರ್ಬೋಚಿತವಾಗಿ ಮಾತನಾಡಿದರು. 

 

ಈ ಸಂದರ್ಭದಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಶ್ರೀಮತಿ ಅನಿತಾ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಕೆ.ಎಮ್.ಎಪ್. ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ನಗರ ಕಾಂಗ್ರೆಸ್ ಅಧ್ಯಕ್ಷರುಗಳಾದ ರಾಜೇಂದ್ರ ದೇವಾಡಿಗ ಮತ್ತು ರೀನಾ ಡಿಸೋಜ, ವಿವಿಧ ಘಟಕಗಳ ಅಧ್ಯಕ್ಷರುಗಳು, ಗ್ರಾಮೀಣ ಸಮಿತಿಯ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ಗ್ಯಾರಂಟಿ ಸಮಿತಿಯ ಸದಸ್ಯರುಗಳು,‌ ಮಹಿಳಾ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 

ಗ್ಯಾರಂಟಿ ಸಮಿತಿಯ ಸದಸ್ಯ ಪಿಲಿಪ್ ಮಸ್ಕರನೇನಸ್ ಸ್ವಾಗತಿಸಿ ಹೇಮಂತ ಆಚಾರ್ಯ ಧನ್ಯವಾದವಿತ್ತು ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.

Previous Post

ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!

Next Post

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026

Recent News

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved