Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

Dhrishya News by Dhrishya News
22/07/2025
in मौसम
0
ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!
0
SHARES
47
VIEWS
Share on FacebookShare on Twitter

ಉಡುಪಿ, ಜು.21: ಲಕ್ಷಾಂತರ ರೂ. ವೌಲ್ಯದ ಅಡಿಕೆ ಕಳ್ಳತನ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ಎರಡು ತಿಂಗಳ ಹಿಂದೆ ನಡೆದಿತ್ತು ಈ ಪ್ರಕರಣ ಕ್ಕೆ ಸಂಬಂಧಿಸಿ ಈ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದ.ಕ. ಜಿಲ್ಲೆಯ ಕಡಬ ತಾಲೂಕಿನ ಬಾಳ್ತಿಲ ಗ್ರಾಮ ನೂಜಿ ಮಾವಿನಕಟ್ಟೆಯ ಸಂತೋಷ(35), ಭಟ್ಕಳ ಗುಳ್ಮಿ ನಿವಾಸಿಗಳಾದ ಧಾರವಾಡ ಮೂಲದ ಶಾನೂರು ಬಾಬುಲಾಲ್ ನವಾಜ್(31), ಖ್ವಾಜಾ ಮಹಮ್ಮದ್(26), ಮಹಮ್ಮದ್ ಸಾಧಿಕ್(27) ಬಂಧಿತ ಆರೋಪಿಗಳು. ಬಂಧಿತರಿಂದ ಕಳವು ಮಾಡಿದ 455 ಕೆ.ಜಿ ಅಡಿಕೆ ಮತ್ತು ಕೃತ್ಯಕ್ಕೆ ಬಳಸಿಕತ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಹಡಿನಗದ್ದೆಯ ಮಸೂದ್ ಪಟೇಲ್ ಎಂಬವರು ತನ್ನ ತೋಟ ಬೆಳೆದ ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಗೋಡೌನ್ನಲ್ಲಿ ಇಟ್ಟಿದ್ದರು. ಮೇ 15ರಿಂದ ಮೇ 22ರ ಮಧ್ಯಾವಧಿಯಲ್ಲಿ ಕಳ್ಳರು ಗೋಡೌನ್ ಬೀಗ ಮುರಿದು ಒಳನುಗ್ಗಿ ಒಟ್ಟು 5.60ಲಕ್ಷ ರೂ. ವೌಲ್ಯದ ಅಡಿಕೆಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿತ್ತು. ಅದರಂತೆ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಇದರ ತನಿಖೆ ಮತ್ತು ಆರೋಪಿಗಳ ಪತ್ತೆಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ನಾಯ್ಕ್ ಹಾಗೂ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವೀತ್ರ ತೇಜ್ ನಿರ್ದೇಶನದಲ್ಲಿ ಬೈಂದೂರು ಎಸ್ಸೈಗಳಾದ ತಿಮ್ಮೇಶ್ ಬಿ.ಎನ್., ನವೀನ ಬೋರಕರ, ಕೊಲ್ಲೂರು ಎಸ್ಸೈ ವಿನಯ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು.

ಅದರಂತೆ ಕಾರ್ಯಾಚರಣೆ ನಡೆಸಿದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ನಾಗೇಂದ್ರ, ಕೊಲ್ಲೂರು ಠಾಣೆ, ಸುರೇಶ್, ಚಿದಾನಂದ, ಮಾಳಪ್ಪ ದೇಸಾಯಿ, ಪರಯ್ಯ ಮಠಪತಿ, ರವೀಂದ್ರ, ಅಶೋಕ, ಹಾಗೂ ಚಂದ್ರ ಪಾಲ್ಗೊಂಡಿದ್ದರು

Previous Post

ಕೋಟ : ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ನಿಂದ ಮನೆಯಲ್ಲಿದ್ದ ಸೊತ್ತುಗಳು ಕಳವು – ಪ್ರಕರಣ ಧಾಖಲು..!!

Next Post

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!!

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved