Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!

Dhrishya News by Dhrishya News
22/07/2025
in मौसम
0
ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!
0
SHARES
155
VIEWS
Share on FacebookShare on Twitter

ನವದೆಹಲಿ, ಜುಲೈ 22: ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು ಧರ್ಮ ಗುರು ಡಾ. ಕೆಎ ಪೌಲ್  ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ

ಕಳೆದ 10 ದಿನಗಳಿಂದ ಹಗಲಿರುಳು ಪ್ರಯತ್ನ ನಡೆಸಿದ ನಾಯಕರ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದಿರುವ ಡಾ. ಪೌಲ್, “ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದಾಗಿದ್ದು, ಇದನ್ನು ಯಶಸ್ವಿಗೊಳಿಸಲು ಭಾಗಿಯಾಗಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ದೇವರ ದಯೆಯಿಂದ, ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮ್ಮ ರಾಜತಾಂತ್ರಿಕರನ್ನು ಕಳುಹಿಸಿದ್ದಕ್ಕೆ ಮತ್ತು ನಿಮಿಷಾ ಅವರನ್ನು ವೃತ್ತಿಪರವಾಗಿ, ಸುರಕ್ಷಿತವಾಗಿ ಕರೆದೊಯ್ಯಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಘಟನೆ ವಿವರ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ 2017ರಲ್ಲಿ ಯೆಮೆನ್ ಪ್ರಜೆಯ ಕೊಲೆಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಯಿತು. 2020ರಲ್ಲಿ ಅವರಿಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು. ಅವರ ಅಂತಿಮ ಮನವಿಯನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ತಿರಸ್ಕರಿಸಿತು. ಅವರು ಪ್ರಸ್ತುತ ಯೆಮೆನ್ ರಾಜಧಾನಿ ಸನಾದಲ್ಲಿ ಬಂಧನದಲ್ಲಿದ್ದಾರೆ.

ನಿಮಿಷಾ ಪ್ರಿಯಾಳನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು. ಆದರೆ, ಆಕೆಯ ಕುಟುಂಬದೊಂದಿಗೆ ಸಂಭಾವ್ಯ ಒಪ್ಪಂದಕ್ಕೆ ಹೆಚ್ಚಿನ ಸಮಯವನ್ನು ಪಡೆಯಲು ಭಾರತವು ಒತ್ತಡ ಹೇರಿದ ನಂತರ ಯೆಮೆನ್ ಅಧಿಕಾರಿಗಳು ಆಕೆಯ ಮರಣದಂಡನೆಯನ್ನು ಮುಂದೂಡಿದರು.

ನಿಮಿಷಾ ಪ್ರಿಯಾಳ ತಾಯಿ ಪ್ರೇಮಕುಮಾರಿ ಕಳೆದ ವರ್ಷ ತನ್ನ ಮಗಳ ಬಿಡುಗಡೆಗಾಗಿ ಮನವಿ ಮಾಡಲು ಯೆಮೆನ್‌ಗೆ ಪ್ರಯಾಣ ಬೆಳೆಸಿದರು. ಕೇರಳದ ಸುನ್ನಿ ಧರ್ಮಗುರು ಒಬ್ಬರು ಮಧ್ಯಪ್ರವೇಶಕ್ಕಾಗಿ ಪ್ರಮುಖ ಯೆಮೆನ್ ಧಾರ್ಮಿಕ ಗುರುಗಳನ್ನು ಸಂಪರ್ಕಿಸಿದರು. ಈ ಪ್ರಯತ್ನಗಳ ಹೊರತಾಗಿಯೂ, ಯೆಮೆನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಔಪಚಾರಿಕ ರಾಜತಾಂತ್ರಿಕ ಸಂಬಂಧಗಳ ಕೊರತೆಯಿಂದಾಗಿ ಅಡೆತಡೆಗಳು ಮುಂದುವರೆದಿವೆ.

38 ವರ್ಷದ ಭಾರತೀಯ ಪ್ರಜೆಯಾದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ  ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು.

ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಯಿತು. ಆಕೆ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ.

ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು ಧರ್ಮ ಗುರು ಡಾ. ಕೆಎ ಪೌಲ್ ಮಂಗಳವಾರ ರಾತ್ರಿ (ಸ್ಥಳೀಯ ಸಮಯ) ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ..!!

Next Post

ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ – ಡಾ. ಮಹಾಬಲೇಶ್ವರ ರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ – ಡಾ. ಮಹಾಬಲೇಶ್ವರ ರಾವ್..!!

ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ – ಡಾ. ಮಹಾಬಲೇಶ್ವರ ರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved