Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

Dhrishya News by Dhrishya News
05/08/2025
in ಸುದ್ದಿಗಳು
0
ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!
0
SHARES
10
VIEWS
Share on FacebookShare on Twitter

ಕಾರ್ಕಳ, ಆಗಸ್ಟ್ 5:ತುಳುನಾಡಿನ ವೈಭವದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಪರಿಸರದ ಮಹತ್ವವನ್ನು ಬೋಧಿಸುವ ದೃಷ್ಟಿಯಿಂದ ಎಳ್ಳಾರೆ ಗ್ರಾಮದ ಮುಳ್ಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’ ಎಂಬ ವಿಶಿಷ್ಟ ಕಾರ್ಯಕ್ರಮವು ಮಂಗಳವಾರ ಜರುಗಿತು.

 

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭಾಸ್ಕರ್ ಟಿ ಅವರು, “ತುಳುನಾಡಿನ ಯಕ್ಷಗಾನ, ದೈವಾರಾಧನೆ, ನಾಗಾರಾಧನೆ ಮೊದಲಾದ ಪರಂಪರೆಗಳು ಇಂದು ನಶಿಸುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ಹೊಸ ಪೀಳಿಗೆಗೆ ಸಂಸ್ಕೃತಿಯ ಅರಿವು ಮೂಡಿಸುತ್ತವೆ. ಗ್ರಾಮೀಣ ಶಾಲೆಯಲ್ಲಿ ಈ ರೀತಿಯ ಶ್ಲಾಘನೀಯ ಚಟುವಟಿಕೆ ನಡೆಯುತ್ತಿದೆ ಎಂಬುದು ಸಂತಸಕರ” ಎಂದರು. ಅವರು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ಉದ್ಯಮಿ ಕಮಲಾಕ್ಷ ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, “ವಿದ್ಯೆ ಇಲ್ಲದವನು ಪಶು ಸಮಾನ. ವಿದ್ಯೆಯಿಂದ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣ ಬೆಳೆಯುತ್ತದೆ. ಮಕ್ಕಳಲ್ಲಿ ಗೌರವ ಮತ್ತು ವಿನಯಶೀಲತೆ ಬೆಳೆಬೇಕಾಗಿದೆ” ಎಂಬ ಸಂದೇಶ ನೀಡಿದರು.

 

ಕಾರ್ಯಕ್ರಮದ ರೂವಾರಿ ಹಾಗೂ SDMC ಅಧ್ಯಕ್ಷ ಸತೀಶ್ ಪೂಜಾರಿ ಮುಳ್ಳಾಡು ಮಾತನಾಡಿ, “ಸನಾತನ ಧರ್ಮದಲ್ಲಿ ಋಷಿ ಮತ್ತು ಕೃಷಿ ಪರಂಪರೆಗಳಿಗೆ ಮಹತ್ವವಿದೆ. ಶಾಲೆಯ 62 ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೆಸರಿನಲ್ಲಿ 62 ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ನೀಡಲಾಗಿದೆ. ಜೊತೆಗೆ ಆಟಿ ತಿಂಗಳ ಹಿನ್ನೆಲೆಯಲ್ಲಿ ಹಳೆಯ ಕಾಲದ ಜೀವನ ಶೈಲಿಯ ಪರಿಚಯವನ್ನೂ ಈ ಮೂಲಕ ನೀಡಲಾಗಿದೆ” ಎಂದು ವಿವರಿಸಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡ್ತಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಕೇಶ್ ಹೆಗ್ಡೆ ವಹಿಸಿ ಶುಭ ಹಾರೈಸಿದರು.

 

ಕಾರ್ಯಕ್ರಮದಲ್ಲಿ ದಿನೇಶ್ ಪೈ ಮುನಿಯಾಲು, ಕವಿತಾ ರಾಮಕೃಷ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾಶಿವ ಪ್ರಭು, ಉಡುಪಿ ನಗರಸಭೆ ಸದಸ್ಯ ಸದಾನಂದ ಕುಲಾಲ್, ಜ್ಯೋತಿ ಹರೀಶ್, ಅರುಣ್ ಹೆಗ್ಡೆ, ಮಾಲತಿ ಕುಲಾಲ್, ವಿಶ್ವನಾಥ ನಾಯಕ್, ರವೀಂದ್ರ ಪ್ರಭು ಕಡ್ತಲ, ಅರಣ್ಯಾಧಿಕಾರಿ ಕರುಣಾಕರ ಜೆ. ಆಚಾರ್ಯ, ರವಿ ಪೂಜಾರಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

 

ಶಿಕ್ಷಕ ಸುಭಾಷ್ ಕಾರ್ಯಕ್ರಮವನ್ನು ನಿರೂಪಿಸಿದರು.

ಮುಖ್ಯೋಪಾಧ್ಯಾಯ ಜನಾರ್ದನ ಬೆಳಿರಾಯ ಸ್ವಾಗತ ಭಾಷಣ ಮಾಡಿದರು.

ಶಿಕ್ಷಕಿ ರೂಪಶ್ರಿ ಪ್ರಭು ಹಾಗೂ ಇತರ ಶಿಕ್ಷಕರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

 

 

—

Previous Post

ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

Next Post

ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

ಸಾಮಾಜಿಕ ಮಾಧ್ಯಮದಲ್ಲಿ ಹೊಸ ದಾಖಲೆ ನಿರ್ಮಿಸಿದ ದೀಪಿಕಾ ಪಡುಕೋಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved