Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ನಾರಾಯಣ ಗುರು ಉದ್ಯಾನವನದ ಶಿಲಾನ್ಯಾಸ ಕಾರ್ಯಕ್ರಮ..!!

Dhrishya News by Dhrishya News
10/09/2025
in ಸುದ್ದಿಗಳು
0
ಶ್ರೀ ನಾರಾಯಣ ಗುರು ಉದ್ಯಾನವನದ ಶಿಲಾನ್ಯಾಸ ಕಾರ್ಯಕ್ರಮ..!!
0
SHARES
8
VIEWS
Share on FacebookShare on Twitter

ಉಡುಪಿ : ಶ್ರೀ ನಾರಾಯಣ ಗುರುಗಳ ಆಶಯದಂತೆ ಶ್ರೀ ನಾರಾಯಣ ಗುರು ಉದ್ಯಾನವನ ನಿರ್ಮಾಣ ಒಂದು ಐತಿಹಾಸಿಕ ನಿರ್ಧಾರವಾಗಿದೆ. ಶ್ರೀ ನಾರಾಯಣ ಗುರು ಯುವ ವೇದಿಕೆಯ ಇಂತಹ ಸಮಾಜಮುಖಿ ಕೆಲಸಗಳು ಸಮಾಜಕ್ಕೂ ಕೂಡ ಉತ್ತಮ ಸಂದೇಶವಾಗಿದೆ. ಜಾತಿಪೀಡಿತ ಸಮಾಜದಲ್ಲಿ ಸಾಮಾಜಿಕ ಸಮಾನತೆಯ ಅಭಿವೃದ್ಧಿಗಳು ಸಮಾಜದ ಒಗ್ಗಟ್ಟನ್ನು ಇನ್ನಷ್ಟು ಹೆಚ್ಚಿಸುತ್ತದೆ. ಇಂತಹ ಕೆಲಸಗಳ ಮೂಲಕ ಸಮಾಜದಲ್ಲಿನ ತಾರತಮ್ಯಗಳು ಕೂಡ ದೂರವಾಗಲಿ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

ಶ್ರೀ ನಾರಾಯಣ ಗುರುಗಳ ಸಮಾನತೆಯ ಸಂದೇಶ ಸಾರುವ ಮತ್ತು ಸಾಮರಸ್ಯದ ಸಂದೇಶ ಸಾರುವ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇವರ ಮುತುವರ್ಜಿಯಲ್ಲಿ ಉಡುಪಿ ಬಲಾಯಿಪಾದೆ ಬಳಿ ಕುತ್ಪಾಡಿ ಗರಡಿ ರಸ್ತೆಯಲ್ಲಿ ರೂಪುಗೊಂಡಿರುವ 108 ಶ್ರೀ ಗಂಧದ ಮರಗಳ ನಡುವೆ ವಿಶೇಷವಾಗಿ ವಿನ್ಯಾಸಗೊಂಡಿರುವ ಶ್ರೀ ನಾರಾಯಣ ಗುರು ಉದ್ಯಾನವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 

ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ಮತ್ತು ಶ್ರೀ ಗುರು ವಂದನೆ ಮಾಯಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸೊರಕೆಯವರು ಚಾಲನೆ ನೀಡಿದರು.

 

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಮಾತಾಡಿ, ಶ್ರೀ ನಾರಾಯಣ ಗುರು ಯುವ ವೇದಿಕೆ ಮೇಲುಸ್ತುವಾರಿಯಲ್ಲಿ ನಡೆಯುವ ಇಂತಹ ಒಳ್ಳೆಯ ಕೆಲಸಕ್ಕೆ ತಮ್ಮ ಸಂಪೂರ್ಣ ಸಹಕಾರ ಇದೆ. ತನ್ನ ಸ್ವಕ್ಷೇತ್ರದಲ್ಲಿ ನಿರ್ಮಾಣ ಗೊಳ್ಳುವ ಶ್ರೀ ನಾರಾಯಣ ಗುರುಗಳ ಉದ್ಯಾನವನದಲ್ಲಿ ಪಾಲ್ಗೊಳ್ಳುವುದು ಒಂದು ಪುಣ್ಯದ ಕೆಲಸವಾಗಿದೆ. ಈ ಐತಿಹಾಸಿಕ ಯೋಜನೆ ಆದಷ್ಟು ಶೀಘ್ರವಾಗಿ ಸಂಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.

 

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಾಮನ ಬಂಗೇರ, ಯುವವಾಹಿನಿ ಅಧ್ಯಕ್ಷರಾದ ದಯಾನಂದ ಕರ್ಕೇರ, ಹರೀಶ್ ಪೂಜಾರಿ ಮಲ್ಪೆ, ಕಡೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಕರ ಸೇರಿಗಾರ್, ಉಪಾಧ್ಯಕ್ಷ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರಾದ ರಾಘವೇಂದ್ರ ಕುತ್ಪಾಡಿ, ಪ್ರಶಾಂತ್ ಸಾಲಿಯಾನ್, ವೀಣಾ ಪ್ರಕಾಶ್, ಸುಲೋಚನ, ಉದ್ಯಮಿ ಕಿಶನ್ ಹೆಗ್ಡೆ, ಪ್ರಮುಖರಾದ ಮುತ್ತಯ್ಯ ಕೋಟ್ಯಾನ್, ಶೇಖರ್ ಅಂಚನ್, ಯೋಗೇಶ್ ಕೋಟ್ಯಾನ್, ಸಂತೋಷ್ ಕುಮಾರ್, ವಿಜಯ್ ಪೂಜಾರಿ, ಗಣೇಶ್ ಕುಮಾರ್, ಶೇಖರ್ ಕೋಟ್ಯಾನ್, ಗಿರೀಶ್ ಕುಮಾರ್ ಉದ್ಯಾವರ, ದಿನೇಶ್ ಜತ್ತನ್, ಪ್ರಕಾಶ್ ಪೂಜಾರಿ, ಹಬೀಬ್ ಅಲಿ, ರೋಯ್ಸ್ ಫೆರ್ನಾಂಡಿಸ್, ರಿಯಾಜ್ ಪಳ್ಳಿ, ನಂದ ಕಿಶೋರ್, ದಿವಾಕರ್ ಬೊಳ್ಜೆ, ಲಕ್ಷ್ಮಣ ಸನಿಲ್, ಸಚಿನ್ ಸಾಲ್ಯಾನ್, ಸೋಮಸುಂದರ್ ಉಡುಪಿ, ಶಶಿಧರ್ ಬಂಗೇರ ಕಡೆಕಾರ್, ಬಾಲಕೃಷ್ಣ ಪೂಜಾರಿ ಕುಕ್ಕುಂಜೆ, ಶಬರೀಷ್ ಸುವರ್ಣ, ಸಾಯಿ ರಾಜ್ ಕೋಟ್ಯಾನ್, ಸುಜಯ್ ಪೂಜಾರಿ, ಪ್ರಭಾಕರ ಕೋಟ್ಯಾನ್, ಸತೀಶ್ ಬೀರಪ್ಪಾಡಿ, ರಘು ಸನಿಲ್, ಸುಪ್ರೀತ್ ಸುವರ್ಣ, ಸುಧಾಕರ್ ಉದ್ಯಾವರ, ಸುನೀಲ್ ಪೂಜಾರಿ ಮಲ್ಪೆ ಮುಂತಾದವರು ಉಪಸ್ಥಿತರಿದ್ದರು.

ಶ್ರೀ ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಮಿಥುನ್ ಅಮೀನ್ ಸ್ವಾಗತಿಸಿದರೆ, ಗೌರವಾಧ್ಯಕ್ಷ ಸದಾಶಿವ ಅಮೀನ್ ವಂದಿಸಿದರು. ಸ್ಟೀವನ್ ಕುಲಾಸೋ ಉದ್ಯಾವರ ಕಾರ್ಯಕ್ರಮ ನಿರೂಪಣೆ ಮಾಡಿದರು.

Previous Post

ಕೃಷ್ಣ ಲೀಲಾ ರಸಪ್ರಶ್ನೆ (Online): 21-ಆಗಸ್ಟ್ ರಿಂದ 11-ಸೆಪ್ಟೆಂಬರ್ ವರೆಗೆ..!

Next Post

ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನ ಕನ್ನರ್ಪಾಡಿ ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನ ಕನ್ನರ್ಪಾಡಿ ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನ ಕನ್ನರ್ಪಾಡಿ ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved