ಉಡುಪಿ: ಸೆಪ್ಟೆಂಬರ್ 13:ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕಾಪು ಇಲ್ಲಿ ಇಂದು ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು
ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಿಂದೆ ಗುರುಕುಲ ಶಿಕ್ಷಣ ಪದ್ದತಿ ಇತ್ತು ಆಗ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ನಮ್ಮ ಕಲೆ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಪ್ರಯತ್ನ ನಡೆಯುತ್ತಿತ್ತು ಎಂದು ಹೇಳಿದ ಅವರು ಸ್ಕೂಲ್ ಇಸ್ ಟೆಂಪಲ್ ಆಫ್ ಲರ್ನಿಂಗ್ ಪ್ರತಿ ಮಗುವು ಭಿನ್ನ ಆ ಮಗುವಿನ ಕಲಿಕೆಯು ಭಿನ್ನ ಎಂದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆ ಸದಸ್ಯರಾದ ನಾಗೇಶ್, ಕಾಲೇಜು ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾಂವಕರ್, ಉಪನ್ಯಾಸಕರಾದ ದೀಪಿಕಾ ಸುವರ್ಣ, ಅತಿಥಿಗಳಾದ ನರೇಂದ್ರ ರೈ, ರಾಘವೇಂದ್ರ ನಾಯಕ್ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








