Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ: ವೈಭವದ ವಿಟ್ಲಪಿಂಡಿ ಉತ್ಸವಕ್ಕೆ ಅದ್ದೂರಿ ತೆರೆ..!!

Dhrishya News by Dhrishya News
16/09/2025
in ಮುಖಪುಟ, ಸುದ್ದಿಗಳು
0
ಉಡುಪಿ: ವೈಭವದ ವಿಟ್ಲಪಿಂಡಿ ಉತ್ಸವಕ್ಕೆ ಅದ್ದೂರಿ ತೆರೆ..!!
0
SHARES
11
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 16 : ಶ್ರೀ ಕೃಷ್ಣನೂರು ಉಡುಪಿ ಯಲ್ಲಿ ವಿಟ್ಲಪಿಂಡಿ ಉತ್ಸವವು ಸೋಮವಾರ ಭಕ್ತ ಜನಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು.

ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ಇನ್ನೊಂದು ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಉತ್ಸವ ಮೂರ್ತಿನ್ನಿರಿಸಿ ಮೆರವಣಿಗೆ ನಡೆಸಲಾಯಿತು.

ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶೀಂಧ್ರತೀರ್ಥ ಶ್ರೀಪಾದರು, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಮಠದ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ವಿವಿಧ ಗಣ್ಯರು ಉತ್ಸವದಲ್ಲಿ ಭಾಗವಹಿಸಿದ್ದರು.

 ವಿಟ್ಲಪಿಂಡಿಯ ಉತ್ಸವ ಭಕ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು. ಹುಲಿವೇಷಧಾರಿಗಳು ಹಾಗೂ ಅನೇಕ ಕಲಾತಂಡ, ತಮ್ಮ ಪ್ರದರ್ಶನ ತೋರಿ ವಿಟ್ಲಪಿಂಡಿ ಉತ್ಸವಕ್ಕೆ ಇನ್ನಷ್ಟು ಮೆರುಗು ತಂದರು.

ಮಡಿಕೆ ಓಡೆದು ಸಂಭ್ರಮಿಸಿದ ಗೊಲ್ಲ ವೇಷಧಾರಿಗಳು ಶ್ರೀ ಕೃಷ್ಣ ಮಠದ ಎದುರು ಹಾಗೂ ರಥಬೀದಿಯಲ್ಲಿ ನಿರ್ಮಿಸಲಾದ ಗುರ್ಜಿಗಳಲ್ಲಿ ಮೊಸರು ತುಂಬಿದ ಮಡಿಕೆಗಳನ್ನು ನೇತುಹಾಕಲಾಗಿತ್ತು. ಅದನ್ನು ಗೊಲ್ಲ ವೇಷಧಾರಿಗಳು ಒಡೆದು ವಿಟ್ಲಪಿಂಡಿಯನ್ನು ಸಂಭ್ರಮದಿಂದ ಆಚರಿಸಿದರು.

 ಶ್ರೀ ಕೃಷ್ಣಜನ್ಮಾಷ್ಟಮಿ, ವಿಟ್ಲಪಿಂಡಿ ಹಬ್ಬಕ್ಕೆಂದು ಭಕ್ತರಿಗಾಗಿ ತಯಾರಿಸಲಾದ ಉಂಡೆ, ಚಕ್ಕುಲಿಯನ್ನು ಶ್ರೀ ಕೃಷ್ಣನಿಗೆ ನೈವೇದ್ಯ ಮಾಡಲಾಯಿತು. ಆ ಬಳಿಕ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿಯ ಹಬ್ಬದಲ್ಲಿ ಪಾಲ್ಗೊಂಡ ಅನೇಕ ಭಕ್ತರಿಗೆ, ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಉಂಡೆ, ಚಕ್ಕುಲಿಯ ಪ್ರಸಾದವನ್ನು ವಿತರಿಸಿದರು.

ಕೃಷ್ಣನ ಮೃಣ್ಮಯ ಮೂರ್ತಿ ಮಧ್ವಸರೋವರದಲ್ಲಿ ಜಲಸ್ಥಂಭನ : ಕೃಷ್ಣನ ಮೃಣ್ಮಯ(ಮಣ್ಣಿನ) ಮೂರ್ತಿ ನವರತ್ನದಲ್ಲಿರಿಸಿ ರಥಬೀದಿಯಲ್ಲಿ ಒಂದು ಸುತ್ತು ರಥೋತ್ಸವ ನಡೆಸಿ, ಬಳಿಕ ಮಧ್ವಸರೋವರದಲ್ಲಿ ಜಲಸ್ಥಂಭನ ಮಾಡುವ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಯು ಸಮಾಪನಗೊಂಡಿತು.

ಕಳೆದ ಹಲವಾರು ದಿನಗಳಿಂದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿದ್ದ ಶ್ರೀ ಕೃಷ್ಣಜನ್ಮಾಷ್ಟಮಿ, ವಿಟ್ಲಪಿಂಡಿಯ ಹಬ್ಬಕ್ಕೆ ತೆರೆಬಿದ್ದಿತು. ಅನೇಕ ಸಾಂಸ್ಕೃತಿಕ ಕಾರ್ಯಕ್ರಮ, ಸ್ಪರ್ಧಾ ಕಾರ್ಯಕ್ರಮ ಮೂಲಕ ಕಣ್ಮನ ಸೆಳೆದ ಶ್ರೀ ಕೃಷ್ಣಾಷ್ಟಮಿಯಲ್ಲಿ ಹಲವಾರು ಭಕ್ತರು ಪಾಲ್ಗೊಂಡು ಅಷ್ಟಮಿ ವಿಟ್ಲಪಿಂಡಿಯ ಹಬ್ಬದ ವೈಭವವನ್ನು ಕಣ್ತುಂಬಿಕೊಂಡರು.

Previous Post

ತಡರಾತ್ರಿ ಮಾನಸಿಕ ಖಿನ್ನತೆಯ ವ್ಯಕ್ತಿಯ ರಕ್ಷಣೆ: ಸೂಚನೆ..!!

Next Post

ಉಡುಪಿ:  ನಾಗರಿಕ ಸಮಿತಿಯಿಂದ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿ ಸ್ಮರಣಾರ್ಥ ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಪ್ರಯುಕ್ತ 10 ಸಾವಿರ ಚಕ್ಕುಲಿ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:  ನಾಗರಿಕ ಸಮಿತಿಯಿಂದ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿ ಸ್ಮರಣಾರ್ಥ ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಪ್ರಯುಕ್ತ 10 ಸಾವಿರ ಚಕ್ಕುಲಿ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved