Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!

Dhrishya News by Dhrishya News
19/09/2025
in ಸುದ್ದಿಗಳು
0
ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!
0
SHARES
7
VIEWS
Share on FacebookShare on Twitter

ಉಡುಪಿ : ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಮಹತ್ತರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ತಿಳಿಸಿದರು.

 

 ನಗರದ ಶೋಕಮಾತಾ ದೇವಾಲಯದ ಆವರಣದಲ್ಲಿರುವ ಆವೇ ಮರಿಯಾ ಸಭಾಂಗಣದಲ್ಲಿ ನಡೆದ ಉಡುಪಿ ಕೆಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 28ನೇ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರುಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಹೇಳಿದರು.

 

 ಸಹಕಾರ ಸಂಘಗಳು ಪ್ರಾಮಾಣಿಕವಾಗಿ ಜನಪರ ಕೆಲಸ ಮಾಡಿದಂತೆ, ಸಾಲ ಪಡೆದ ಸದಸ್ಯರುಗಳು ಸಮಯಕ್ಕೆ ಸರಿಯಾಗಿ ಸಾಲಗಳನ್ನು ಮರುಪಾವತಿ ಮಾಡಿದ್ದಲ್ಲಿ ಸಂಘವು ಅಭಿವೃದ್ಧಿಯ ಉತ್ತುಂಗಕ್ಕೇರುತ್ತದೆ. ಇಂದು ಸಹಕಾರ ಸಂಘಗಳು ರಾಷ್ಟೀಕೃತ ಬ್ಯಾಂಕ್‌ಗಳಿಗೆ ಸಮನಾಗಿ ಸೇವೆಯನ್ನು ನೀಡಿ, ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು. 

 

ಉಡುಪಿ ಶೋಕಮಾತಾ ದೇವಾಲಯದ ಸಹಾಯಕ ಧರ್ಮಗುರುಗಳಾದ ವಂದನೀಯ ಫಾ| ಲಿಯೋ ಪ್ರವೀಣ್ ಡಿ’ಸೋಜಾ ಆಶೀರ್ವಚನ ನೀಡಿದರು. ಸಂಘದ ಅಧ್ಯಕ್ಷ ಲೂವಿಸ್ ಲೋಬೊ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಸಂಘದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಸಂಘವು ರೂ. 250 ಕೋಟಿಗೂ ಮೀರಿ ವ್ಯವಹಾರವನ್ನು ಮಾಡಿ ರೂ. 94 ಲಕ್ಷ ಲಾಭಗಳಿಸಿದ್ದು, ಸಂಘದ ಸದಸ್ಯರುಗಳಿಗೆ 18% ಲಾಭಾಂಶವನ್ನು ಘೋಷಣೆ ಮಾಡಿದರು. 

 

ಸಂಘದ ಪ್ರಧಾನ ವ್ಯವಸ್ಥಪಕರಾದ ಸಂದೀಪ್ ಫೆರ್ನಾಂಡಿಸ್ ರವರು ವಾರ್ಷಿಕ ವರದಿಯನ್ನು ವಾಚಿಸಿದರು. ಸಂಘದ ಸ್ಥಾಪಕ ಸಂಚಾಲಕರು, ಮಾಜಿ ಅಧ್ಯಕ್ಷರಾದ ದಿವಂಗತ ಲೂವಿಸ್ ಡಿ’ಅಲ್ಮೇಡಾ ರವರ 28 ವರ್ಷಗಳ ಸೇವೆಗಾಗಿ ನೀಡಿದ ಸನ್ಮಾನವನ್ನು ಅವರ ಪತ್ನಿ ವಯ್ಲೆಟ್ ಡಿ’ಅಲ್ಮೇಡಾ ರವರು ಸ್ವೀಕರಿಸಿದರು. ಸಂಘದ ವಿಶ್ರಾಂತ ನಿರ್ದೇಶಕರುಗಳಾದ ಫೆಲಿಕ್ಸ್ ಪಿಂಟೋ, ಫ್ರಾಂಕ್ಲಿನ್ ಮಿನೇಜಸ್, ಜೆಸಿಂತಾ ಡಿ’ಸೋಜ, ಕೇವಿನ್ ಆರ್. ಪಿರೇರಾ ಮತ್ತು ಗಿಲ್ಬರ್ಟ್ ಫೆರ್ನಾಂಡಿಸ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಸಿ.ಎ. ಪರಿಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ಸದಸ್ಯರುಗಳ ಮಕ್ಕಳಿಗೆ ವಿಧ್ಯಾರ್ಥಿ ವೇತನ, 13 ಅನಾರೋಗ್ಯ ಮತ್ತು ಅಶಕ್ತರಿಗೆ ಮತ್ತು ಎರಡು ಸಂಸ್ಥೆಗಳಿಗೆ ಆರ್ಥಿಕ ಸಹಾಯವನ್ನು ನೀಡಲಾಯಿತು. 

 

ಸಂಘದ ಉಪಾಧ್ಯಕ್ಷರಾದ ಜೇಮ್ಸ್ ಡಿ’ಸೋಜ ಸ್ವಾಗತಿಸಿ, ನಿರ್ದೇಶಕರಾದ ಆರ್. ಮಾಕ್ಸಿಂ ಡಿ’ಸೋಜ ವಂದಿಸಿದರು. ಸ್ಟೀವನ್ ಕುಲಾಸೋ ಕಾರ್ಯಕ್ರಮ ನಿರ್ವಹಣೆ ಮಾಡಿದರು. 

 

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಇಗ್ನೇಷಿಯಸ್ ಮೋನಿಸ್, ಪರ್ಸಿ ಜೆ. ಡಿ’ಸೋಜ, ಆರ್ಚಿಬಾಲ್ಡ್ ಎಸ್. ಡಿ’ಸೋಜ, ಡಾ| ನೇರಿ ಕರ್ನೇಲಿಯೋ, ಲಾಯ್ಸೆಟ್ ಜೆ. ಕರ್ನೇಲಿಯೋ, ರಿಚರ್ಡ್ ಡಾಯಸ್, ಡಾಲ್ಫಿ ವಿ. ಲೂವಿಸ್, ವಿಲಿಯಂ ಮಚಾದೋ, ಓನಿಲ್ ಜೆ. ಡಿ’ಸೋಜ, ಜೆನೆವೀವ್ ಎಂ. ಮಿನೇಜಸ್, ಫ್ರ್ಯಾಂಕ್ ಪೀಟರ್ ಕರ್ಡೋಜಾ, ಸಂಘದ ಸಿಬ್ಬಂದಿ ವರ್ಗ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರದಿಂದ “ವೆನಮ್ಸ್” ಸಹಾಯವಾಣಿಗೆ ಚಾಲನೆ..!!

Next Post

ಹಿರಿಯ ಸಂಶೋಧಕ, ಇತಿಹಾಸ ತಜ್ಞ, ಬರಹಗಾರ ಪ್ರೊ| ಡಾ| ಕೆ.ಜಿ. ವಸಂತ ಮಾಧವ ನಿಧನ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯ ಸಂಶೋಧಕ, ಇತಿಹಾಸ ತಜ್ಞ, ಬರಹಗಾರ ಪ್ರೊ| ಡಾ| ಕೆ.ಜಿ. ವಸಂತ ಮಾಧವ ನಿಧನ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved