Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

Dhrishya News by Dhrishya News
22/09/2025
in ಸುದ್ದಿಗಳು
0
ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!
0
SHARES
7
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 22:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿಎಸ್ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

 

ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅದಕ್ಕೆ ತಕ್ಕುದಾದ ಸಕಾಲಿಕ ನಿರ್ಣಯವನ್ನು ತೆಗೆದುಕೊಂಡಿದೆ. ಆ ಮುಖೇನ ದೇಶದ ರೈತರ, ಯುವ ಜನರ ಮತ್ತು ಸಣ್ಣ ಉದ್ದಿಮೆದಾರರ ಹಿತ ರಕ್ಷಣೆಗೆ ಮುಂದಾಗಿದೆ. ಜಿಎಸ್ಟಿ ದರ ಕಡಿತ ಗೊಳಿಸುವ ಮೂಲಕ ಸಾಮಾನ್ಯ ಜನರ, ಬಡವರ ಮತ್ತು ಮಧ್ಯಮ ವರ್ಗದವರ ಕೈಯಲ್ಲಿ ಹಣ ಉಳಿಯುವಂತೆ ಮಾಡಿ ಹೆಚ್ಚಿನ ಖರೀದಿಗೆ ಪ್ರೋತ್ಸಾಹಿಸಿ, ವಿಕಸಿತ ಭಾರತಕ್ಕೆ ಮುನ್ನುಡಿ ಬರೆದಿದೆ.

 

ಸುಮಾರು 390ಕ್ಕಿಂತಲೂ ಹೆಚ್ಚಿನ ವಸ್ತುಗಳ ತೆರಿಗೆಯನ್ನು ಕಡಿತಗೊಳಿಸಿ ಗರಿಷ್ಠ ವಿನಾಯಿತಿಯನ್ನು ನೀಡಿರುವ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಣಯವನ್ನು ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮದಿಂದ ಸ್ವಾಗತಿಸುತ್ತದೆ.

 

ಜಿಎಸ್ಟಿ ದರ ಕಡಿತ ದೇಶವಾಸಿಗಳಿಗೆ ನವರಾತ್ರಿ, ದೀಪಾವಳಿ ಸಹಿತ ಇತರ ಹಬ್ಬಗಳನ್ನು ಸಂಭ್ರಮಿಸಲು ದೊರೆತ ಬೋನಸ್ ನಂತಿದೆ ಎಂದು ಕುತ್ಯಾರು ತಿಳಿಸಿದ್ದಾರೆ.

 

ಈ ಪ್ರಕ್ರಿಯೆ ಯಶಸ್ವಿಯಾಗಲು ಜನತೆ ಈ ರೀತಿ ಸಹಕಾರ ನೀಡಬೇಕಾಗಿದೆ:

 

1. ತಯಾರಕರು ಜಿಎಸ್ಟಿ ದರ ಕಡಿತಗೊಳಿಸಿದ ವಸ್ತುವಿಗೆ ಹೊಸ ಕಡಿತ ದರ ಪ್ರಿಂಟ್ ಮಾಡುವುದು. ಈಗಾಗಲೇ ತಯಾರಾದ ವಸ್ತುವಿಗೆ ಹೊಸ ದರ ಸ್ಟಿಕ್ಕರ್ ಅಂಟಿಸುವುದು.

 

2. ವ್ಯಾಪಾರಿಗಳು ಕಡಿತಗೊಂಡ ಬೆಲೆಯಲ್ಲಿಯೇ ಮಾರುವುದು. ಮೊದಲೇ ಖರೀದಿಸಿದ MRP ಬೆಲೆ ಇದ್ದರೂ ಕಡಿತ ದರದ ಹೊಸ ಸ್ಟಿಕ್ಕರ್ ಅಂಟಿಸುವುದು.

 

3. ಗ್ರಾಹಕರು ನಿಗದಿತ ವಸ್ತುಗಳನ್ನು ಖರೀದಿಸುವಾಗ ಕಡಿತಗೊಳಿಸಿದ ಬೆಲೆಯಲ್ಲಿಯೇ ಕೇಳಿ ಪಡೆಯುವುದು.

 

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶೀಯ ವಸ್ತುಗಳನ್ನು ಖರೀದಿಸಿ ಆತ್ಮ ನಿರ್ಭರತೆಗೆ ಪ್ರೋತ್ಸಾಹ ನೀಡಬೇಕು.

 

ಉಡುಪಿ ಜಿಲ್ಲಾ ಬಿಜೆಪಿ ಈ ಬಗ್ಗೆ ಜನತೆಗೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಕಾರ್ಯಾಗಾರ, ಅಲ್ಲಲ್ಲಿ ಜಾಹೀರಾತುಗಳು ಮತ್ತು ಗ್ರಾಹಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಸಂಭ್ರಮಾಚರಣೆಯನ್ನು ನಡೆಸಿ ಜಿಎಸ್ಟಿ ಸುಧಾರಣೆಯ ಲಾಭ ಜನರಿಗೆ ತಲುಪುವಂತೆ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಎಸ್. ಕೆ. ಪಿ. ಎ. ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು..!!

Next Post

ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved