Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆ ಅಪ್ಪಳಿಸಲಿದೆ “ಮೋಚಾ”- ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ

Dhrishya News by Dhrishya News
13/05/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
2
VIEWS
Share on FacebookShare on Twitter

ಕೋಲ್ಕತ್ತಾ/ಢಾಕಾ: ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ “ಮೋಚಾ’ ಚಂಡಮಾರುತವು “ಅತ್ಯಂತ ತೀವ್ರತರವಾದ’ ಚಂಡಮಾರುತವಾಗಿ ಬದಲಾಗಲಿದ್ದು, ಈ ಅಬ್ಬರವನ್ನು ಎದುರಿಸಲು ಪಶ್ಚಿಮ ಬಂಗಾಳ, ಬಾಂಗ್ಲಾ ಮತ್ತು ಮ್ಯಾನ್ಮಾರ್‌ಗಳು ಸಜ್ಜಾಗಿವೆ.

ಭಾನುವಾರ(ಮೇ 14) ಮೋಚಾ ಸೈಕ್ಲೋನ್‌ ಬಾಂಗ್ಲಾದೇಶ-ಮ್ಯಾನ್ಮಾರ್‌ ಗಡಿ ಭಾಗದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಪ್ರಭಾವವೆಂಬಂತೆ, ಪಶ್ಚಿಮ ಬಂಗಾಳ, ಒಡಿಶಾ, ಬಾಂಗ್ಲಾ-ಮ್ಯಾನ್ಮಾರ್‌ನ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಭಾನುವಾರದವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಸಾವಿರಾರು ಮಂದಿಯ ಸ್ಥಳಾಂತರ:
ಶುಕ್ರವಾರವೇ ಬಾಂಗ್ಲಾ ಸರ್ಕಾರ ಸುಮಾರು 5 ಲಕ್ಷ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭಿಸಿದೆ. 576 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಇದು ಪ್ರಸಕ್ತ ವರ್ಷ ಹಿಂದೂ ಮಹಾಸಾಗರದಲ್ಲಿ ಕಂಡುಬರುತ್ತಿರುವ ಮೊದಲ ಚಂಡಮಾರುತ. ಇದು ಬಹಳ ಅಪಾಯಕಾರಿ ಸೈಕ್ಲೋನ್‌ ಆಗಿದ್ದು, ಸಾವಿರಾರು ಮಂದಿ ಮೀನುಗಾರರು ಮತ್ತು ಕರಾವಳಿಯ ಜನರಿಗೆ ಹಾನಿ ಉಂಟುಮಾಡುವ ಭೀತಿಯಿದೆ. 2008ರ ಮೇ ತಿಂಗಳಲ್ಲಿ ಅಪ್ಪಳಿಸಿದ್ದ ನರ್ಗಿಸ್‌ ಚಂಡಮಾರುತವು 1.38 ಲಕ್ಷ ಮಂದಿಯನ್ನು ಬಲಿತೆಗೆದುಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತದ ಎಫೆಕ್ಟ್ ಎಂಬಂತೆ ದಿಢೀರ್‌ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸುವ ಸಾಧ್ಯತೆಯೂ ಇದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಬಂಗಾಳದಲ್ಲಿ ಕಟ್ಟೆಚ್ಚರ
ಚಂಡಮಾರುತವು ಭಾರೀ ಪ್ರಮಾಣದಲ್ಲಿ ಹಾನಿ ಮಾಡುವ ಸಾಧ್ಯತೆ ಇರುವ ಕಾರಣ, ಪಶ್ಚಿಮ ಬಂಗಾಳ ಸರ್ಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕರಾವಳಿ ಪ್ರದೇಶದಲ್ಲಿರುವ ಮತ್ತು ತಗ್ಗುಪ್ರದೇಶದಲ್ಲಿರುವ ಸಾವಿರಾರು ಮಂದಿಯನ್ನು ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಜತೆಗೆ, ಅಲ್ಲಿಗೆ ಪರಿಹಾರ ಸಾಮಗ್ರಿಗಳನ್ನೂ ತಲುಪಿಸಲಾಗಿದೆ. ಮೂರು ದಿನಗಳ ಕಾಲ ಸಮುದ್ರದ ಬಳಿ ತೆರಳದಂತೆ ಮೀನುಗಾರರು ಮತ್ತು ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ದಿಘಾಗೆ ಶುಕ್ರವಾರವೇ ಎನ್‌ಡಿಆರ್‌ಎಫ್ ತಂಡ ಆಗಮಿಸಿದೆ.

ಭಾರತದಲ್ಲಿ ಹೈಅಲರ್ಟ್‌
ಮೋಚಾ ಚಂಡಮಾರುತವು ಬಾಂಗ್ಲಾ-ಮ್ಯಾನ್ಮಾರ್‌ ಗಡಿಯಲ್ಲಿ ಅಪ್ಪಳಿಸುತ್ತಿದೆಯಾದರೂ ಭಾರತದ ಈಶಾನ್ಯ ಭಾಗದಲ್ಲಿ ಇದರ ಪ್ರಭಾವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ್‌ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್‌, ಮಣಿಪುರ, ದಕ್ಷಿಣ ಅಸ್ಸಾಂನಲ್ಲಿ ಭಾನುವಾರದವರೆಗೂ ಭಾರೀ ಮಳೆಯಾಗಲಿದೆ. ಜತೆಗೆ, ಕೇರಳ, ಒಡಿಶಾ ಮತ್ತು ಕರ್ನಾಟಕದಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದೂ ಇಲಾಖೆ ಮುನ್ನೆಚ್ಚರಿಕೆ ನೀಡಿದೆ 

Previous Post

ಮುನಿಯಾಲು ಉದಯ ಶೆಟ್ಟಿ- ಮುತಾಲಿಕ್ ಹೋರಾಟದ ನಡುವೆ ತಮ್ಮ ಕ್ಷೇತ್ರ ಉಳಿಸಿಕೊಂಡ ಪವರ್ ಮಿನಿಸ್ಟರ್ ಸುನಿಲ್ ಕುಮಾರ್…!!

Next Post

ಕಾರ್ಯಕರ್ತರು ದೃತಿಗೆಡಬೇಕಿಲ್ಲ-ಮುನಿಯಾಲು ಉದಯ್ ಕುಮಾರ್ ಶೆಟ್ಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಯಕರ್ತರು ದೃತಿಗೆಡಬೇಕಿಲ್ಲ-ಮುನಿಯಾಲು ಉದಯ್ ಕುಮಾರ್ ಶೆಟ್ಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )

01/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026

Recent News

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 01 ಶುಕ್ರವಾರ )

01/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved