Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಐಟಿಕ್ಲಬ್ ನ ಉದ್ಘಾಟನಾ ಸಮಾರಂಭ..!!

Dhrishya News by Dhrishya News
27/10/2025
in ಸುದ್ದಿಗಳು
0
ಐಟಿಕ್ಲಬ್ ನ ಉದ್ಘಾಟನಾ ಸಮಾರಂಭ..!!
0
SHARES
7
VIEWS
Share on FacebookShare on Twitter

ಕಾರ್ಕಳ:ಅಕ್ಟೋಬರ್ 27:ಭುವನೇಂದ್ರ ಕಾಲೇಜಿನ ಐಕ್ಯುಎಸಿ ಮತ್ತು ಗಣಕ ವಿಜ್ಞಾನ ವಿಭಾಗದ ಸಹಭಾಗಿತ್ವದಲ್ಲಿ ಐಟಿಕ್ಲಬ್ ನ ಉದ್ಘಾಟನಾ ಸಮಾರಂಭವು ನೆರವೇರಿತು. ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರತೀಕ್ ರಮೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾನಾಡುತ್ತಾ ವಿದ್ಯಾರ್ಥಿಗಳು ಯಾವಾಗಲೂ ಶಿಕ್ಷಕರ ಪ್ರತಿಬಿಂಬವಾಗಿರುತ್ತಾರೆ. ತಂತ್ರಜ್ಞಾನದ ಕ್ಷೇತ್ರದಲ್ಲಿ ಅನುಭವವೇ ಮುಖ್ಯ. ಕಲಿಕೆಯೆನ್ನುವುದು ಇಲ್ಲಿ ಹೊಸದಾಗಿ ಇರುತ್ತದೆಯೇ ಹೊರತು ಮುಗಿಯುವುದು ಅಂತೇನಿಲ್ಲ. ಹಾಗಾಗಿ ಶಿಕ್ಷಕರು ಈಗಿನ ವಿದ್ಯಾರ್ಥಿಗಳ ಮಟ್ಟಕ್ಕೆ ತಲುಪುವತ್ತ ಬೆಳೆಯಬೇಕಾದ ಅನಿವಾರ್ಯತೆ ಇಂದಿನ ದಿನಗಳಲ್ಲಿ ಬಹಳ ಅಗತ್ಯವಾಗಿದೆ ಎಂದರು. ಅವರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹಾಗೂ ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತಾ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಮಂಜುನಾಥ ಎ. ಕೋಟ್ಯಾನ್ ಮಾತನಾಡುತ್ತಾ ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಅವರವರ ಕಲಿಕೆಯ ವಿಭಾಗಗಳಿಗೆ ಅನುಗುಣವಾಗಿ ಅನೇಕ ಹೆಚ್ಚುವರಿ ಕೋರ್ಸುಗಳನ್ನು ತರಲಾಗಿದೆ. ಗಣಕ ವಿಭಾಗದ ತಂತ್ರಜ್ಞಾನದ ಕ್ರಿಯಾಶೀಲತೆಗಾಗಿ ಸಂಸ್ಥೆ ಮತ್ತಷ್ಟು ಸುಧಾರಿತ ಕಲಿಕಾ ಕ್ರಮಗಳನ್ನು ನೀಡಿದೆ. ಆನಿಮೇಶನ್, ಆರ್ಟಿಫಿಷಲ್ ಇಂಟೆಲಿಜೆನ್ಸ್ ಈ ಕಾಲಕ್ಕೆ ಪ್ರಸ್ತುತವಾಗುವ ತಂತ್ರಜ್ಞಾನದ ವಿಧಗಳಾಗಿವೆ. ಹಾಗಾಗಿ ಅದನ್ನು ಕಲಿತುಕೊಳ್ಳುವ ಅನಿವಾರ್ಯತೆ ವಿದ್ಯಾರ್ಥಿ ಹಾಗೂ ಶಿಕ್ಷಕರಿಬ್ಬರಿಗೂ ಇದೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಯಾವತ್ತಿಗೂ ಆದರ್ಶವಾಗಬೇಕು ಅನ್ನುವುದು ಎಲ್ಲ ಕಾಲಕ್ಕೂ ಅನ್ವಯವಾಗುವ ಸಂಗತಿಯಾಗಿದೆ. ಶಿಕ್ಷಕರೂ ವಿದ್ಯಾರ್ಥಿಗಳ ಆಲೋಚನೆಗಳಿಗೆ ತಕ್ಕಂತೆ ಕಾಲಕಾಲಕ್ಕೆ ಅಪ್ಡೇಟ್ ಆಗಬೇಕಾದ ಅನಿವಾರ್ಯತೆ ಇದೆ. ಇವತ್ತಿನ ವಿದ್ಯಮಾನಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮನ್ನು ಹೆಚ್ಚು ತೊಡಗಿಸಿಕೊಂಡಾಗ ಕಲಿಕೆಯು ಕುಂಟುತ್ತಾ ಸಾಗದೆ ಪ್ರಗತಿಯ ಕಡೆ ನಡೆಯಲು ಧೈರ್ಯವನ್ನು ಕಲಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕರಾದ ಪ್ರೊ. ಲಕ್ಷ್ಮೀನಾರಾಯಣ ಕೆ.ಎಸ್., ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಈಶ್ವರ ಭಟ್, ಐಟಿ ಕ್ಲಬ್ ನ ಕಾರ್ಯದರ್ಶಿಗಳಾದ ವೆಂಕಟರಮಣ ಶೆಣೈ, ಮನಸ್ವಿನಿ, ಪವಿತ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರೂ, ಐಟಿ ಕ್ಲಬ್ ನ ಸಂಯೋಜಕರೂ ಆಗಿರುವ ಸ್ವಾತಿ ಕೆ.ಸ್ವಾಗತಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಜಾಯ್ಸಿಲ್ ಡಿಸೋಜಾ ಧನ್ಯವಾದಗೈದರು.

Previous Post

ಚಾರ್ಮಾಡಿ ಘಾಟಿ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಟ್ಯಾಂಕರ್‌ :ಸಂಚಾರ ಅಸ್ತವ್ಯಸ್ತ..!!

Next Post

ಬಿಜೆಪಿ ಮಹಿಳಾ ಮೋರ್ಚ ಕಾರ್ಕಳ-ದೀಪಾವಳಿ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ ಮಹಿಳಾ ಮೋರ್ಚ ಕಾರ್ಕಳ-ದೀಪಾವಳಿ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026