Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್..!!

Dhrishya News by Dhrishya News
28/10/2025
in ಸುದ್ದಿಗಳು
0
ವೋಟ್ ಚೋರಿ ಮೂಲಕ ಗೆಲುವಿನ ಅನಿವಾರ್ಯತೆ ಪ್ರಸಾದ್ ಕಾಂಚನ್ ಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ : ದಿನೇಶ್ ಅಮೀನ್..!!
0
SHARES
31
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 28:ಉಡುಪಿಯಲ್ಲಿ ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಉಡುಪಿಯಲ್ಲಿ ವೋಟ್ ಚೋರಿ ಮೂಲಕ ಬಿಜೆಪಿ ಪಕ್ಷ ಗೆದ್ದಿದೆ ಎಂಬ ಅಧಾರ ರಹಿತ ಬಾಲಿಶ ಹೇಳಿಕೆಯನ್ನು ಕಳೆದ ಚುನಾವಣೆಯಲ್ಲಿ ಉಡುಪಿ ಜನತೆಯ ಮೂಲಕ ಹೀನಾಯವಾಗಿ ಸೋಲಿಸಲ್ಪಟ್ಟ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಕಾಂಚನ್ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ವೋಟ್ ಚೋರಿ ನಡೆಸಿ ವಾಮ ಮಾರ್ಗವಾಗಿ ಗೆಲ್ಲುವ ಅನಿವಾರ್ಯತೆ ಉಡುಪಿ ಕ್ಷೇತ್ರಕ್ಕೆ ಚುನಾವಣೆ ಸಂದರ್ಭದಲ್ಲಿ ಲಕ್ಕಿಡಿಪ್ ಅಭ್ಯರ್ಥಿ ಪ್ರಸಾದ್ ಕಾಂಚನ್ ರಿಗೆ ಇದೆ ಹೊರತು ಬಿಜೆಪಿ ಪಕ್ಷಕ್ಕಲ್ಲ ಎಂದು ಬಿಜೆಪಿ ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪತ್ರಿಕಾ ಪ್ರಕಟಣೆಯಲ್ಲಿ ದಿನೇಶ್ ಅಮೀನ್ ತಿಳಿಸಿರುವ ವಿಚಾರ ಗಳು ಹೀಗಿವೆ

 

ದೇಶದ ಚುನಾವಣಾ ವ್ಯವಸ್ಥೆ, ಚುನಾವಣಾ ಆಯೋಗ, ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಕಪ್ಪುಚುಕ್ಕೆ ಇಡುವ ರೀತಿಯಲ್ಲಿ ಗಂಭೀರ ಆರೋಪವನ್ನು ಮಾಡುತ್ತಿರುವ ರಾಹುಲ್ ಗಾಂಧಿಯ ಅಪ್ರಬುದ್ಧ ಚಾಳಿಯನ್ನೇ ಮುಂದುವರಿಸುವ ಮೂಲಕ ರಾಹುಲ್ ಗಾಂಧಿಯನ್ನೇ ಮೂರ್ಖತನದಲ್ಲಿ ಮೀರಿಸಲು ಪ್ರಸಾದ್ ಕಾಂಚನ್ ಮುಂದಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ತಕಾರರುಗಳಿದ್ದರೆ ಈ ಬಗ್ಗೆ ದಾಖಲೆಗಳನ್ನು ಸಲ್ಲಿಸಿ ನ್ಯಾಯಾಂಗದ ಮೂಲಕ ಪ್ರಶ್ನಿಸಬೇಕೇ ಹೊರತು ಬಸ್ ನಿಲ್ದಾಣದ ಮುಂದೆ ಮೈಕ್ ಹಿಡಿದು ಅರಚಿ ಮೈಪರಚಿಕೊಂಡರೆ ಪ್ರಯೋಜನವಿಲ್ಲ. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮೂಲಕ ಉಡುಪಿಯ ಜನತೆ ನೀಡಿದ ಜನಾದೇಶವನ್ನು ಒಪ್ಪದೆ ಚುನಾವಣೆ ನಡೆದು ಸುಮಾರು 30 ತಿಂಗಳ ಬಳಿಕ ಒಮ್ಮೆಲೇ ಜ್ಞಾನೋದಯವಾದಂತೆ ಆಧಾರ ರಹಿತ ಆರೋಪ ಮಾಡುವ ಮೂಲಕ ಪ್ರಸಾದ್ ಕಾಂಚನ್ ಉಡುಪಿಯ ಸುಶಿಕ್ಷಿತ ಪ್ರಜ್ಞಾವಂತ ಹಾಗೂ ರಾಷ್ಟ್ರೀಯವಾದಿ ಚಿಂತನೆಯ ಮತದಾರರಿಗೆ ಅವಮಾನ ಮಾಡಿದ್ದು, ತಕ್ಷಣ ಉಡುಪಿ ಜನತೆಯ ಬೇಷರತ್ತಾಗಿ ಕ್ಷಮೆ ಯಾಚಿಸಬೇಕು.

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪುಡಾರಿಗಳು ಅಧಿಕಾರಿಗಳ ಮೇಲೆ ಒತ್ತಡ ಆಮಿಷ ಹೇರಿ ಕೈಗೊಂಬೆಯಂತೆ ಮಾಡಿಕೊಡು ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗಿ ಪರಿವರ್ತನೆಯಾಗಿ ವ್ಯಾಪಕ ಭ್ರಷ್ಟಾಚಾರ ಮಾಡುತ್ತಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಕಾರ್ಯವೈಖರಿ, ಸಾರ್ವಜನಿಕರ ಅರ್ಜಿಗಳ ವಿಲೇವಾರಿಗೆ ಅಸಡ್ಡೆ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ನಾಮ ನಿರ್ದೇಶನಗೊಂಡ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಬಗ್ಗೆ ಸದಾ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಜಿಲ್ಲಾಸ್ಪತ್ರೆ ಬಾಕಿ ಕಾಮಗಾರಿ ಅನುದಾನ, ಹಕ್ಕು ಪತ್ರ, ಪ್ರಾಕೃತಿಕ ವಿಕೋಪ ಅನುದಾನ, ಹಾಸ್ಟೆಲ್ ಕೊರತೆ, ರಸ್ತೆ ಕಾಮಗಾರಿಗೆ ಯಾವುದೇ ಅನುದಾನ ಬಿಡುಗಡೆ ಮಾಡದೇ ಉಡುಪಿ ಜನತೆಗೆ ಸಮಸ್ಯೆ ತಂದಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ಧೈರ್ಯ ಮತ್ತು ಯೋಗ್ಯತೆ ಪ್ರಸಾದ್ ಕಾಂಚನ್ ರವರಿಗೆ ಇಲ್ಲ. 

ಪಾರದರ್ಶಕ ಚುನಾವಣೆಯ ಬಗ್ಗೆ ಮಾತನಾಡುವ ಪ್ರಸಾದ್ ಕಾಂಚನ್ ದಶಕಗಳ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಬೂತ್ ಗಳ ಮೇಲೆ ಬೆಂಕಿ ಹಚ್ಚಿ ಕಾರ್ಯಕರ್ತರಿಗೆ ಹಲ್ಲೆ ಮಾಡಿ ನಕಲಿ ಮತದಾನ ಮಾಡಿದ ಘಟನೆಯ ಬಗ್ಗೆ ಮಾಹಿತಿ ಇಲ್ಲದಿದ್ದಲ್ಲಿ ಅವರ ತಾಯಿ ಸರಳಾ ಕಾಂಚನ್ ಅವರ ಬಳಿ ಕೇಳಿ ತಿಳಿಯಲಿ.

ಉಡುಪಿಯ ಹಲವು ಉದ್ಯಮಿಗಳು, ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ವ್ಯಕ್ತಿಗಳ ಮೂಲಕ ಹಣ ಸಂಗ್ರಹಿಸಿ ಕಾರ್ಯಕ್ರಮ ನಡೆಸಿ ಅದೇ ವ್ಯಕ್ತಿಯಲ್ಲಿ ಅಂತಹ ವ್ಯಕ್ತಿಗಳಿಗೆ ಸನ್ಮಾನ ಮಾಡುವ ಬೆಳವಣಿಗೆ ನಡೆಯುತ್ತಿರುವುದು ದುರದೃಷ್ಟಕರ.

ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನಾತ್ಮಕವಾಗಿ ಸದೃಢವಾಗಿದ್ದು, ಬಿಜೆಪಿ ಸಿದ್ಧಾಂತ, ರಾಷ್ಟ್ರೀಯತೆ, ಅಭಿವೃದ್ಧಿ ಪರ ಚಿಂತನೆ ಹಾಗೂ ಹಿಂದುತ್ವದ ವಿಚಾರದಲ್ಲಿ ಜಿಲ್ಲೆಯ ಪ್ರಜ್ಞಾವಂತ ಜನತೆ ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು 5 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದಾರೆ. ಪ್ರಸಾದ್ ಕಾಂಚನ್ ಇನ್ನಾದರೂ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಮೊದಲು ತಮ್ಮ ಪಕ್ಷದ ನಾಯಕರ ಮಾರ್ಗದರ್ಶನ ಪಡೆದು ಹೇಳಿಕೆ ನೀಡಲಿ. ಪ್ರಸಾದ್ ಕಾಂಚನ್ ರವರ ಈ ಬಾಲಿಶ ಹೇಳಿಕೆಗಳ ಬಗ್ಗೆ ನಮ್ಮ ಅನುಕಂಪವಿದೆ ಎಂದು ದಿನೇಶ್ ಅಮೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳ :ದೇವಳದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ..!

Next Post

ಉಡುಪಿ : ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮಟ್ಟದ ಶೈಕ್ಷಣಿಕ ಜಾಥಾ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮಟ್ಟದ ಶೈಕ್ಷಣಿಕ ಜಾಥಾ ಕಾರ್ಯಕ್ರಮ..!

ಉಡುಪಿ : ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮಟ್ಟದ ಶೈಕ್ಷಣಿಕ ಜಾಥಾ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved