Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳ : ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ, ಮೂಲ ಸೌಕರ್ಯ,ಉಪನ್ಯಾಸಕರ ಕೊರತೆ – ಎಬಿವಿಪಿಯಿಂದ ಪ್ರತಿಭಟನೆ..!!

Dhrishya News by Dhrishya News
30/10/2025
in ಮುಖಪುಟ
0
ಕಾರ್ಕಳ : ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ, ಮೂಲ ಸೌಕರ್ಯ,ಉಪನ್ಯಾಸಕರ ಕೊರತೆ – ಎಬಿವಿಪಿಯಿಂದ ಪ್ರತಿಭಟನೆ..!!
0
SHARES
3
VIEWS
Share on FacebookShare on Twitter

 

ಉಡುಪಿ:ಅಕ್ಟೋಬರ್ 30 :ಉಡುಪಿ ಜಿಲ್ಲೆಯ ಕಾರ್ಕಳ ದಲ್ಲಿರುವ ಏಕೈಕ ಸರಕಾರಿ ನರ್ಸಿಂಗ್ ಕಾಲೇಜಿನ,ಸ್ವಂತ ಕಟ್ಟಡ, ಮೂಲ ಸೌಕರ್ಯ,ಉಪನ್ಯಾಸಕರ ಕೊರತೆ ಸೇರಿದಂತೆ ವಿವಿಧ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಎಬಿವಿಪಿ ವತಿಯಿಂದ ಅಕ್ಟೋಬರ್ 29ರಂದು ಪ್ರತಿಭಟನೆ ನಡೆಯಿತು.

ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿರುವ ಕಾಲೇಜು ಆವರಣದಿಂದ ಕಾರ್ಕಳ ತಾಲೂಕು ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಬಂದ ವಿದ್ಯಾರ್ಥಿಗಳು ಬಳಿಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.

ಎಬಿಪಿವಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಗಣೇಶ್ ಪೂಜಾರಿ ಮಾತನಾಡಿ, 2022ರ ಎಪ್ರಿಲ್ನಲ್ಲಿ ಕಾರ್ಕಳದಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ಮೊದಲ ಬ್ಯಾಚ್ ಪ್ರಾರಂಭವಾಗಿದೆ. ಈ ಬ್ಯಾಚಿನ ವಿದ್ಯಾರ್ಥಿಗಳು 2026ರಲ್ಲಿ ತೇರ್ಗಡೆಯಾಗಲಿದ್ದಾರೆ. ಕಾಲೇಜು KNC ಅನುಮೋದಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಒಳಪಟ್ಟಿದೆಯಾದರೂ ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ ಎಂದರು.

ಎಬಿಪಿವಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಗಣೇಶ್ ಪೂಜಾರಿ ಮಾತನಾಡಿ, 2022ರ ಎಪ್ರಿಲ್‌ನಲ್ಲಿ ಕಾರ್ಕಳದಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ಮೊದಲ ಬ್ಯಾಚ್ ಪ್ರಾರಂಭವಾಗಿದೆ. ಈ ಬ್ಯಾಚಿನ ವಿದ್ಯಾರ್ಥಿಗಳು 2026ರಲ್ಲಿ ತೇರ್ಗಡೆಯಾಗಲಿದ್ದಾರೆ. ಕಾಲೇಜು KNC ಅನುಮೋದಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಒಳಪಟ್ಟಿದೆಯಾದರೂ ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿದೆ ಎಂದರು.

ದ. ಕ, ಉಡುಪಿ ಜಿಲ್ಲೆಯಲ್ಲಿರುವ ಏಕೈಕ ಸರಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಇದಾಗಿದ್ದು, ಕಾಲೇಜು ಸ್ಥಾಪನೆಯಾಗಿ 4 ವರ್ಷ ಕಳೆದರೂ ಇದುವರೆಗೂ ಸ್ವಂತ ಕಟ್ಟಡವಾಗಲಿ, ಅಗತ್ಯ ಉಪನ್ಯಾಸಕರಾಗಲಿ, ಮೂಲಭೂತ ಸೌಕರ್ಯಗಳಾಗಲಿ ಇಲ್ಲಿಲ್ಲ. ಪ್ರಸ್ತುತ ಕಾರ್ಕಳ ಸರಕಾರಿ ತಾಲೂಕು ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿದೆ ಎಂದರು.

4 ವರ್ಷದ ಈ ಕೋರ್ಸಿಗೆ ಪ್ರತಿ ಬ್ಯಾಚ್ 40 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶವಿದ್ದು ಒಟ್ಟು 160 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕಾಲೇಜಿಗೆ INC ಮಾನ್ಯತೆ ದೊರೆಯದೆ ಇರುವುದರಿಂದ ಕಾಲೇಜಿನಲ್ಲಿ ಕಲಿತವರು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಮತ್ತು ವಿದೇಶಗಳಲ್ಲಿ ಕೆಲಸ ಮಾಡಲ್ ಸಾಧ್ಯವಾಗದ ಪರಿಸ್ಥಿತಿ ಇದೆ. ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾಲೇಜಿನಲ್ಲಿ ಕೇವಲ ಮೂವರು ಉಪನ್ಯಾಸಕರಿದ್ದು INC ಪ್ರಮಾಣೀಕರಣ ದೊರೆಯಲು ಕನಿಷ್ಠ 16 ಉಪನ್ಯಾಸಕರು ಬೇಕು.

ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು.

ಕಚೇರಿ ಕೆಲಸ ಮಾಡಲು ಮತ್ತು ಕಾಲೇಜಿನ ನಿರ್ವವಹಣೆಗೆ ಗುಮಾಸ್ತರು, ಕಂಪ್ಯೂಟರ್ ಸಹಾಯಕರು, ಸ್ವಚ್ಛತಾ ಸಿಬ್ಬಂದಿ ಅವಶ್ಯಕತೆಯಿದೆ.

ಕ್ಷೇತ್ರ ಭೇಟಿಗೆ 50 ಸೀಟರ್ ಬಸ್ ಮತ್ತು ವಾಹನ ಚಾಲಕರ ಅವಶ್ಯಕತೆಯಿದೆ.

ಕಾಲೇಜಿಗೆ ತಾತ್ಕಾಲಿಕವಾಗಿ ಒದಗಿಸಿರುವ ಆಸ್ಪತ್ರೆಯ ಹಳೆಯ ಕಟ್ಟಡ ಸೋರುತ್ತಿದ್ದು, ವಿದ್ಯುತ್ ಶಾಕ್ ಹೊಡೆಯುವ ಸಂಭವವಿದೆ.

ಆದ್ದರಿಂದ ಹೊಸ ಕಟ್ಟಡ ನಿರ್ಮಾಣವಾಗುವರೆಗೆ ಹಳೆಯ ಕಟ್ಟಡವನ್ನು ತುರ್ತಾಗಿ ದುರಸ್ಥಿಗೊಳಿಸುವುದು ಅಗತ್ಯವಾಗಿದೆ.

ಕಾಲೇಜು ಸರಕಾರದ ಯಾವ ಇಲಾಖೆಗೆ ಸೇರಬೇಕು ಎಂಬ ಸ್ಪಷ್ಟತೆ ಇದುವರೆಗೂ ಸಿಕ್ಕಿಲ್ಲ. ಇದರ ಬಗ್ಗೆ ಸರ್ಕಾರ ಗಮನಹರಿಸಬೇಕೆಂದು ವಿದ್ಯಾರ್ಥಿಗಳು ಮನವಿಯಲ್ಲಿ ವಿನಂತಿಸಿದ್ದಾರೆ.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಪ್ರದೀಪ್ ಆರ್. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು. ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಅಂಚನ್, ಎಬಿವಿಪಿ ಕಾರ್ಕಳ ತಾಲೂಕು ಘಟಕದ ಸುಶಾನ್ ಹಾಗೂ ಸದಸ್ಯರು ಮತ್ತು ಬಿಎಸ್ಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿದ್ದರು.

Previous Post

ನವೆಂಬರ್ 5 ರಂದು  ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ತೀಕ ದೀಪೋತ್ಸವ ..!!

Next Post

ನವಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನವಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ..!!

ನವಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved