ಉಡುಪಿ :ನವೆಂಬರ್ 04:ಕಾಪು ಶ್ರೀ ಹೊಸ ಮಾರಿಗುಡಿಗೆ ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಭೇಟಿ ನೀಡಿದ್ದಾರೆ.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.
ದೇವಸ್ಥಾನದ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಆ ಕಂಬದ ಮುಂದೆ ದೇವಿಶಾ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದು ಟಿ20 ಪಂದ್ಯವನ್ನು ಆಡುತ್ತಿದ್ದಾರೆ.








