ಉಡುಪಿ:ನವೆಂಬರ್ 08:ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ಶನಿವಾರ ವೈಭವದಿಂದ ನಡೆಯಿತು.
ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆ ಜೋಡುಕಟ್ಟೆಯಿಂದ ಕೋರ್ಟ್ ರಸ್ತೆ, ಕನಕದಾಸ ರಸ್ತೆ ಮೂಲಕ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬಂತು.

ರಥಬೀದಿಯಲ್ಲಿರುವ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು

351 ಮಹಿಳೆಯರು ತಲೆಯ ಮೇಲೆ ಕುಂಭ ಕಲಶವನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿಬಂದರು. ಕನಕದಾಸರ ಟ್ಯಾಬ್ಲೊ, ಡೊಳ್ಳು ಕುಣಿತ, ಭಜನೆ ಕುಣಿತ ಮೆರವಣಿಗೆಗೆ ಮೆರುಗು ನೀಡಿತು. ನೂರಾರು ಮಂದಿ ಹಾಲುಮತ ಸಮಾಜದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.








