ಉಡುಪಿ: ನವೆಂಬರ್ 25: ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ನವೆಂಬರ್ 28ರಂದು ‘ಲಕ್ಷಕಂಠ ಗೀತಾ ಪಾರಾಯಣ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ನಗರದಲ್ಲಿ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಪ್ರಕಟಿಸಿದ್ದಾರೆ
ನ. 28 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಆದೇಶಿಸಲಾಗಿದೆ.
ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್-ಬನ್ನಂಜೆ- ಶಿರಿಬೀಡು-ಕಲ್ಪಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರಬೇಕು.
ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಪ್ರೈ ಓವರ್, ಅಂಬಲಪಾಡಿ ಬ್ರಹ್ಮಗಿರಿ- ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರಬೇಕು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ, ಸ್ವಾಗತಗೋಪುರ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರಬೇಕು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನ ದೊಡ್ಡಣಗುಡ್ಡೆ -ಎಂಜಿಎಂ-ಎಸ್ಎಂ-ಬೀಡಿನಗುಡ್ಡೆ ಮಾರ್ಗದಲ್ಲಿ ಉಡುಪಿಗೆ ಬರಬೇಕು .
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮೂಲಕ ಉಡುಪಿಗೆ ಬರಬೇಕು.
ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.








